ಬ್ರೇಕಿಂಗ್ ನ್ಯೂಸ್
21-07-22 09:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 21 : ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋವು ಕಳ್ಳರ ಬಂಧನಕ್ಕೆ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದ್ದು ಅದರಂತೆ ನಡೆದುಕೊಳ್ಳಬೇಕು ಎಂದು ಸೂಚನೆ ನೀಡಿರುವ ಶಾಸಕ ಕಾಮತ್, ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಬಜಾಲ್ ಕಾನಕರಿಯ ನಿವಾಸಿ ಅಶ್ವಿನ್ ಎಂಬವರ ಮನೆಯ ಹಟ್ಟಿಯಿಂದ ಗೋವು ಕಳ್ಳತನವಾಗಿದ್ದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು ಶಾಸಕ ಕಾಮತ್ ಪೊಲೀಸರನ್ನು ಕರೆದು ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರದ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶಾಸಕ ವೇದವ್ಯಾಸ್ ಕಾಮತ್, ಹಿಂದು ಧರ್ಮದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಗೋವಿನಿಂದಲೇ ಬದುಕು ಸಾಗಿಸುವ ಅನೇಕ ಕುಟುಂಬಗಳಿವೆ. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರಕಾರವು ಗೋಹತ್ಯೆ ಪ್ರತಿಬಂಧಕವನ್ನು ಜಾರಿಗೊಳಿಸಿದ್ದು ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಗೋಕಳ್ಳತನ, ಗೋಹತ್ಯೆಯ ಅಪರಾಧ ರುಜುವಾತಾದರೆ ಆಸ್ತಿ ಮುಟ್ಟುಗೋಲು ಹಾಕಲು ಸೂಚನೆ ನೀಡಿದ್ದು ಇದು ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಮುಂದೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾದರೆ ಮತ್ತಷ್ಟು ಕಠಿಣ ಶಿಕ್ಷೆ ಅನುಭವಿಸಲು ಸಿದ್ಧರಿರಬೇಕೆಂದು ಗೋಕಳ್ಳರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಂಕನಾಡಿ ಠಾಣಾಧಿಕಾರಿ ಸಿದ್ದಣ್ಣ ಗೌಡ ಭಜಂತ್ರಿ, ಹಿಂದೂ ಸಂಘಟನೆಯ ಮುಖಂಡರಾದ ಕಿರಣ್ ರೈ ಬಜಾಲ್, ಉಮೇಶ್ ಜಪ್ಪಿನಮೊಗರು, ಪ್ರದೀಪ್ ಪಂಪ್ವೆಲ್, ಪದ್ಮನಾಭ ನಾವೂರು ಸಭೆಯಲ್ಲಿ ಉಪಸ್ಥಿತರಿದ್ದರು.
Mangalore Cow theft at Bajal, MLA Vedavyas kamath orders police to take strict action.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm