ಬ್ರೇಕಿಂಗ್ ನ್ಯೂಸ್
22-07-22 09:43 pm Mangalore Correspondent ಕರಾವಳಿ
ಉಳ್ಳಾಲ, ಜು.22 : ರೈಲ್ವೇ ಇಲಾಖೆಯ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಿದ್ಯುತ್ ತಂತಿಗಳನ್ನ ಕಳವುಗೈದು ಪರಾರಿಯಾಗುತ್ತಿದ್ದ ಟೆಂಪೋ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಉರುಳಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಗುರುವಾರ ನಸುಕಿನಲ್ಲಿ 2.30 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸೋಮೇಶ್ವರ ಬಳಿ ರೈಲ್ವೇ ಕಾಮಗಾರಿಗಾಗಿ ಗೋದಾಮಿನಲ್ಲಿ ಇರಿಸಿದ್ದ ಲಕ್ಷಾಂತರ ಬೆಳೆಬಾಳುವ ವಿದ್ಯುತ್ ತಂತಿಗಳನ್ನು ಕಳವು ಮಾಡಿ, ಟೆಂಪೋದಲ್ಲಿ ಮಂಗಳೂರು ಕಡೆ ತೆರಳುತ್ತಿದ್ದಾಗ ಓವರ್ ಬ್ರಿಡ್ಜ್ ನಿಂದ ತೊಕ್ಕೊಟ್ಟು ಒಳಪೇಟೆ ಸಂಪರ್ಕದ ಇಳಿಜಾರು ರಸ್ತೆಯಲ್ಲಿ ಟೆಂಪೊ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು ಟೆಂಪೋದಲ್ಲಿದ್ದ ಆರೋಪಿಗಳನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದು ಉಳ್ಳಾಲ ಪೊಲೀಸರು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.



ಇಬ್ಬರು ಮಹಿಳೆಯರ ಸಹಿತ ನಾಲ್ಕು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ತಮಿಳುನಾಡು ಮೂಲದ ಪ್ರಸಕ್ತ ಮಂಗಳೂರಿನ ಸೂಟರ್ ಪೇಟೆಯ ನಿವಾಸಿ ವೆಂಕಟೇಶ್, ಹೊಯ್ಗೆ ಬಜಾರಿನ ಜಯಲಕ್ಷ್ಮಿ, ನಂದಿನಿ ಹಾಗೂ ಮೂಲ್ಕಿಯ ರಾಜ್ ಕುಮಾರ್ ಪೊಲೀಸರ ವಶದಲ್ಲಿದ್ದಾರೆ. ಜಯಲಕ್ಷ್ಮಿ, ನಂದಿನಿ ಹಾಗೂ ವೆಂಕಟೇಶನ ಮೇಲೆ ಈ ಮೊದಲೇ ರೈಲ್ವೇ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಕಳ್ಳತನ ಮಾಡಿದ್ದ ವಿದ್ಯುತ್ ತಂತಿಯ ಮೌಲ್ಯ 3.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಗಾಯಾಳು ಆರೋಪಿಗಳನ್ನ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
A tempo met with an accident after robbery of Electronic wires from Ullal Railway Godown in Mangalore. The accused have been hospitalized.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm