ಬ್ರೇಕಿಂಗ್ ನ್ಯೂಸ್
22-07-22 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮಂಗಳೂರಿನಲ್ಲಿ ಅರೆಬರೆ ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಕಾಂಕ್ರೀಟ್ ರಸ್ತೆ ಅಗೆದು ಅಲ್ಲಲ್ಲಿ ಹೊಂಡ ಬಿದ್ದಿರುವುದು, ಕಾಂಕ್ರೀಟ್ ಒಡೆದು ಮಣ್ಣು ತುಂಬಿದ್ದರಿಂದ ವಾಹನ ಸಾಗಾಟಕ್ಕೆ ಸಮಸ್ಯೆ ಆಗಿರುವ ನಡುವಲ್ಲೇ ರಾವ್ ಎಂಡ್ ರಾವ್ ಸರ್ಕಲ್ ಬಳಿ ರಸ್ತೆ ಮಧ್ಯೆ ಹೊಂಡ ಬಿದ್ದಿರುವುದಕ್ಕೆ ಪೊಲೀಸ್ ಸಿಬಂದಿಯೊಬ್ಬರು ಕಲ್ಲು ತುಂಬಿ ಗಮನ ಸೆಳೆದಿದ್ದಾರೆ.
ಸ್ಟೇಟ್ ಬ್ಯಾಂಕ್ ವೃತ್ತದಿಂದ ರಾವ್ ಎಂಡ್ ರಾವ್ ಸರ್ಕಲ್ ಮೂಲಕ ಲೇಡಿಗೋಶನ್ ಕಡೆಗೆ ಸಾಗುವ ರಸ್ತೆಯಲ್ಲಿ ನಡುವೆ ಕಾಂಕ್ರೀಟ್ ರಸ್ತೆಯನ್ನು ಅಗೆದು, ಆನಂತರ ಮಣ್ಣು, ಜಲ್ಲಿ ತುಂಬಲಾಗಿತ್ತು. ಆದರೆ ವಾಹನಗಳು ಸಾಗಿದ ಬಳಿಕ ಮಣ್ಣು ಒಳಗೆ ಜಗ್ಗಿದ್ದರಿಂದ ಆ ಜಾಗ ಹೊಂಡ ಬಿದ್ದಿತ್ತು. ಇದರಿಂದ ಬೈಕ್ ಇನ್ನಿತರ ದ್ವಿಚಕ್ರ ವಾಹನಗಳು ಸಾಗುವುದಕ್ಕೆ ದೊಡ್ಡ ಅಡ್ಡಿಯಾಗಿತ್ತು. ಇದನ್ನು ಗಮನಿಸಿದ ಶುಕ್ರವಾರ ಟ್ರಾಫಿಕ್ ಕರ್ತವ್ಯಕ್ಕೆ ಸ್ಥಳದಲ್ಲಿ ನಿಯೋಜನೆ ಆಗಿದ್ದ ಪಾಂಡೇಶ್ವರ ಸಂಚಾರ ವಿಭಾಗದ ಶರಣಪ್ಪ ಎಂಬ ಪೊಲೀಸ್ ಸಿಬಂದಿ ಸ್ವತಃ ಕಲ್ಲುಗಳನ್ನು ತುಂಬಿ ಹೊಂಡ ಮುಚ್ಚಿದ್ದಾರೆ.



ರಸ್ತೆ ಬದಿ ಹಾಕಲಾಗಿದ್ದ ಇಂಟರ್ ಲಾಕ್ ಕಲ್ಲುಗಳನ್ನು ಹೊಂಡಕ್ಕೆ ಮುಚ್ಚಿ ಇನ್ನಷ್ಟು ದೊಡ್ಡ ಹೊಂಡ ಆಗದಂತೆ ಪ್ರಯತ್ನಿಸಿದ್ದಾರೆ. ಈ ರೀತಿ ಕೈಯಾರೆ ಕೆಲಸ ಮಾಡಿರುವುದನ್ನು ಅಲ್ಲಿನ ಸಾರ್ವಜನಿಕರು ಫೋಟೋ ತೆಗೆದು ಜಾಲತಾಣದಲ್ಲಿ ಹಂಚಿದ್ದು, ಭಾರೀ ವೈರಲ್ ಆಗಿದೆ. ಅಲ್ಲದೆ, ಉತ್ತರ ಕರ್ನಾಟಕ ಮೂಲದ ಪೊಲೀಸ್ ಸಿಬಂದಿಯ ಕಾರ್ಯಕ್ಕೆ ಮೆಚ್ಚುಗೆಯೂ ವ್ಯಕ್ತವಾಗಿದೆ.
Mangalore Traffic cop fills potholes with interlock near State Bank appreciation pours on social media. Sharanappa, attached to the traffic east police station of Pandeshwar with the help of people around filled the gaping pothole with interlocks for the convenience of the public.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm