ಬ್ರೇಕಿಂಗ್ ನ್ಯೂಸ್
23-07-22 11:47 am Mangalore Correspondent ಕರಾವಳಿ
ಉಳ್ಳಾಲ, ಜು.23 : ಕಡಲ್ಕೊರೆತ ತುರ್ತು ತಡೆ ಕಾಮಗಾರಿಗೆ NDRF ಸ್ಕೀಮ್ ನಿಂದ ಹಣ ಬಿಡುಗಡೆ ಮಾಡಲು ಅವಕಾಶವಿದ್ದರೂ NDRF ನಿಧಿಯನ್ನ ಖರ್ಚು ಮಾಡದೆ ಸುಮ್ಮನೆ ಕುಳಿತಿದ್ದಾರೆ. ಇವರಿಗೆ ತುರ್ತು ಕಾಮಗಾರಿ ಎತ್ತಿಕೊಳ್ಳಲು ಯಾರು ಅಡ್ಡಿಯಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ,ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಪ್ರಶ್ನಿಸಿದ್ದಾರೆ.
ಶನಿವಾರ ಬೆಳಗ್ಗೆ ಅವರು ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನ ಆಲಿಸಿದರು. ಕಡಲ್ಕೊರೆತ ಸಮಸ್ಯೆ ಹೊಸದೇನು ಅಲ್ಲ. ನಮ್ಮ ಸರಕಾರ ಆಡಳಿತದಲ್ಲಿದ್ದಾಗ ಅಳಿವೆಬಾಗಿಲು ಸೇರಿದಂತೆ ಅನೇಕ ಕಡಲ್ಕೊರೆತ ಪೀಡಿತ ಪ್ರದೇಶಗಳಲ್ಲಿ ಕಾಮಗಾರಿ ನಡೆಸಿದ್ದೇವೆ. ಯಾವುದೇ ಶಾಶ್ವತ ಕಾಮಗಾರಿ ನಡೆಸಿದರೂ ಪ್ರತಿ ವರುಷವೂ ನಿರ್ವಹಣಾ ಕಾಮಗಾರಿ ಅಗತ್ಯ.


ಆದರೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರವು ಅಸಡ್ಡೆ ತೋರಿ ಕಳೆದ ಮೂರು ವರ್ಷಗಳಿಂದಲೂ ಕಡಲ್ಕೊರೆತ ಪೀಡಿತ ಉಚ್ಚಿಲ, ಬಟ್ಟಪ್ಪಾಡಿ ಪ್ರದೇಶಗಳನ್ನ ಕಡೆಗಣಿಸುತ್ತಾ ಬಂದಿದೆ. ಬಜೆಟಲ್ಲಿ ಕನಿಷ್ಠ ನಿರ್ವಹಣೆಗೂ ಹಣ ಕೊಡದಿದ್ದರೆ ಕಡಲು ಪ್ರಕ್ಷುಬ್ಧಗೊಂಡು ತೀರ ಪ್ರದೇಶವನ್ನ ನುಂಗುವುದು ಖಂಡಿತ. ಈಗಾಗಲೇ ಸ್ಥಳೀಯ ಬೋವಿ ಜನಾಂಗದವರು ಪ್ರದೇಶದಲ್ಲಿ ತಮ್ಮ ಅಸ್ತಿತ್ವವನ್ನೇ ಕಳಕೊಳ್ಳುವ ಭೀತಿಯಲ್ಲಿದ್ದಾರೆಂದರು.

ತಾನು ಮತ್ತು ಶಾಸಕ ಖಾದರ್ ಅವರು ತಕ್ಷಣವೇ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ ಕಡಲ್ಕೊರೆತ ತಡೆಗೆ ತುರ್ತು, ಮಾಧ್ಯಮಿಕ ಮತ್ತು ಶಾಶ್ವತ ಕಾಮಗಾರಿ ನಡೆಸುವ ಬಗ್ಗೆ ಮಾತುಕತೆ ನಡೆಸಲಿದ್ದೇವೆ ಎಂದರು. ಸ್ಥಳೀಯ ಶಾಸಕ ಯು.ಟಿ ಖಾದರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಜೊತೆಯಲ್ಲಿದ್ದರು.
Why is state government neglecting Sea erosion so much, what's making them neglect such things slammed former congress minister Veerappa Moily visiting sea erosion effected areas at Ullal in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm