ಬ್ರೇಕಿಂಗ್ ನ್ಯೂಸ್
23-07-22 03:53 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 23: ಫೇಸ್ಸುಕ್ಕಲ್ಲಿ ಹುಡುಗ- ಹುಡುಗಿ ಕನೆಕ್ಟ್ ಆಗಿ ಲವ್ ಆಗೋದು, ಕೆಲವರು ಯಾರದ್ದೋ ಪ್ರೀತಿಯ ಬಲೆಗೆ ಬಿದ್ದು ಕಿರುಕುಳಕ್ಕೆ ಒಳಗಾಗೋದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬಳು ಹುಡುಗಿ ಫೇಸ್ಬುಕ್ ಪ್ರೇಮ ಪಾಶಕ್ಕೆ ಬಿದ್ದಿದ್ದಲ್ಲದೆ, ಆತನನ್ನೇ ಮದುವೆಯಾಗುತ್ತೇನೆಂದು ಹಠಕ್ಕೆ ಬಿದ್ದು ಕೊನೆಗೆ ಆತನ ನಿಜ ವಿಚಾರ ತಿಳಿಯುತ್ತಲೇ ಬೇಸ್ತುಬಿದ್ದ ಘಟನೆ ಬೆಳಕಿಗೆ ಬಂದಿದೆ.
ಆಕೆ ವಿಟ್ಲ ಠಾಣೆ ವ್ಯಾಪ್ತಿಯ ಬಡ ಕುಟುಂಬದ ಯುವತಿ. ನಾಲ್ಕು ವರ್ಷಗಳಿಂದ ಫೇಸ್ಬುಕ್ಕಲ್ಲಿ ಸಂಪರ್ಕ ಆಗಿದ್ದ ಪ್ರದೀಪ್ ಎಂಬ ಹೆಸರಿನ ವ್ಯಕ್ತಿಯ ಪ್ರೀತಿಗೆ ಬಿದ್ದಿದ್ದಳು. ದಿನವೂ ಫೋನ್ ಮಾಡಿ, ಹರಟೆ ಹೊಡೆಯುತ್ತಾ ಸುಖದ ಕನಸು ಕಂಡಿದ್ದಳು. ಆತನೂ ಮದುವೆಯಾಗುತ್ತೇನೆಂದು ಹೇಳುತ್ತಲೇ ಬಣ್ಣನೆ ಮಾತುಗಳಲ್ಲೇ ಈಕೆಗೆ ಸ್ವರ್ಗ ಸುಖ ತೋರಿಸುತ್ತಿದ್ದ. ಆತನ ಮಾತುಗಳಿಂದಲೇ ಮರುಳಾಗಿದ್ದರಿಂದ ಯುವತಿ ಕ್ಲೀನ್ ಬೌಲ್ಡ್ ಆಗಿದ್ದಳು. ಜೊತೆಗೆ ಆತ ತಾನೊಬ್ಬ ಸಿವಿಲ್ ಇಂಜಿನಿಯರ್ ಎಂದು ಹೇಳಿದ್ದರಿಂದ ಒಳ್ಳೆ ಗಂಡೇ ಸಿಕ್ಕಿದ್ದಾನೆ ಎಂದುಕೊಂಡು ಮನೆಯವರ ನಡುವೆ ಲಲ್ಲೆಗರೆದಿದ್ದಳು. ಈ ಬಗ್ಗೆ ಮನೆಯವರಿಗೂ ಹೇಳಿದ್ದು, ಅವರು ಮಾತ್ರ ಒಲ್ಲೆ ಎಂದಿದ್ದರು. ಫೇಸ್ಬುಕ್ ಪ್ರೇಮ, ಅದೆಲ್ಲ ನಮಗೆ ಆಗಲಿಕ್ಕಿಲ್ಲ. ಅವನ್ಯಾರೋ ಏನೋ, ಬೇರೆ ಹುಡುಗನನ್ನು ನೋಡಿ ಮದುವೆ ಮಾಡ್ತೀವಿ ಎಂದಿದ್ದರು.

ಮನೆಯವರ ಮಾತಿಗೆ ಎದುರಾಡಿದ್ದ ಹುಡುಗಿ, ಮದುವೆಯಾದರೆ ಆತನನ್ನೇ ಎಂದು ಹೇಳಿ ರಂಪ ಮಾಡಿದ್ದಳು. ಕೊನೆಗೆ ಹುಡುಗಿಯ ರಂಪಾಟದಿಂದ ಬೇಸತ್ತ ಮನೆಮಂದಿ ಬಂಟ್ವಾಳದ ಮಹಿಳಾ ವಕೀಲರೊಬ್ಬರ ಬಳಿ ಸಲಹೆ ಕೇಳಿದ್ದರು. ಆಕೆಯ ಸೂಚನೆಯಂತೆ ವಿಟ್ಲ ಪೊಲೀಸ್ ಠಾಣೆಗೂ ದೂರು ನೀಡಲಾಗಿತ್ತು. ಆನಂತರ, ಪ್ರೇಮಿಯ ಮೊಬೈಲ್ ನಂಬರ್ ಆಧರಿಸಿ ಪ್ರದೀಪ್ ಅನ್ನುವ ಹುಡುಗ ಯಾರು ಅನ್ನೋದ್ರ ಬಗ್ಗೆ ಪೊಲೀಸರು ಟ್ರೇಸ್ ಮಾಡಿದ್ದರು. ಚೆಕ್ ಮಾಡಿದಾಗ, ಕುಂದಾಪುರದ ಶಂಕರನಾರಾಯಣ ಎಂಬಲ್ಲಿಂದ ಫೋನ್ ಬರುತ್ತಿರುವುದು ತಿಳಿದುಬಂದಿತ್ತು. ಕೊನೆಗೆ ಅಲ್ಲಿನ ಪೊಲೀಸರು ಮತ್ತು ವಿಟ್ಲ ಪೊಲೀಸರ ಸಹಾಯದಿಂದ ಮಹಿಳಾ ವಕೀಲೆ ಶೈಲಜಾ ರಾಜೇಶ್ ನೇರವಾಗಿ ಪ್ರದೀಪ್ ಅನ್ನೋ ಹುಡುಗನ ಮನೆಗೆ ಎಂಟ್ರಿ ಕೊಟ್ಟಿದ್ದರು.

ಪೊಲೀಸ್ ಮತ್ತು ವಕೀಲೆಯನ್ನು ನೋಡಿದಾಗಲೇ ಆ ಮನೆಯಲ್ಲಿದ್ದ ವ್ಯಕ್ತಿ ಶಾಕ್ ಆಗಿದ್ದ. ಇಲ್ಲಿಂದ ಹುಡುಗನ ನೋಡಲು ಹೋಗಿದ್ದವರು ಕೂಡ ಶಾಕ್ ಆಗಿದ್ದರು. ಜ್ಯೋತಿ ಎಂಬ ಹೆಸರಿನ ಮಂಗಳಮುಖಿಯಾಗಿದ್ದ ಆ ವ್ಯಕ್ತಿ ಫೇಸ್ಬುಕ್ ನಲ್ಲಿ ತನ್ನ ಹೆಸರನ್ನು ಪ್ರದೀಪ್ ಎಂದು ತೋರಿಸಿ ಯುವತಿಗೆ ಜಾಲ ಬೀಸಿದ್ದಳು. ಗಂಡಸಿನ ಧ್ವನಿಯಲ್ಲಿ ಮಾತನಾಡುತ್ತಾ ಬಣ್ಣನೆ ಮಾತುಗಳಿಂದಲೇ ಯುವತಿಯ ಮೈಮಾಟವನ್ನು ಹೊಗಳ್ತಿದ್ದಳು. ಇತ್ತ ಫೇಸ್ಬುಕ್ ಪ್ರೇಮಕ್ಕೆ ಬಿದ್ದು ಆತನನ್ನೇ ಮದುವೆಯಾಗುತ್ತೇನೆಂದು ರಂಪ ಹಿಡಿದಿದ್ದ ಹುಡುಗಿ ವಿಷಯ ತಿಳಿಯುತ್ತಲೇ ಶಾಕ್ ಆಗಿದ್ದಾಳೆ. ನಾಲ್ಕು ವರ್ಷಗಳಿಂದ ಫೇಸ್ಬುಕ್ ಪ್ರೀತಿಗೆ ಬಿದ್ದು ಏನೇನೋ ಕನಸು ಕಂಡಿದ್ದು ಇದೇನಾ ಎಂದುಕೊಂಡು ತನ್ನನ್ನೇ ತಾನು ನಂಬದಾಗಿದ್ದಾಳೆ. ವಕೀಲೆ ಮತ್ತು ಪೊಲೀಸರ ಚಾಣಾಕ್ಷ ನಡೆಯಿಂದಾಗಿ ಪ್ರೀತಿಯ ಮಾಯೆಗೆ ಬಿದ್ದು ಹೊರಳಾಡುತ್ತಿದ್ದ ಯುವತಿಯ ಬಾಳಲ್ಲಿ ತಂಗಾಳಿ ಬೀಸುವಂತಾಗಿದೆ.
Mangalore, Girl from Vitla falls in love on Facebook for about four years and insists to marry him, but parents opposed it and later filed a police complaint after which the girl and the entire family was in shock after the realised that the boy whom she loved was a transgender.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am