ಬ್ರೇಕಿಂಗ್ ನ್ಯೂಸ್
24-07-22 07:12 pm Mangalore Correspondent ಕರಾವಳಿ
ಉಳ್ಳಾಲ, ಜು.24 : ವಿದ್ಯುತ್ ಶಾಕ್ ಹೊಡೆದು ಅಕಾಲಿಕ ಸಾವನ್ನಪ್ಪಿದ್ದ ತೊಕ್ಕೊಟ್ಟು ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯ ಉದ್ಯೋಗಿ ಇಲ್ಯಾಸ್ ಮಹಮ್ಮದ್ ಹರೇಕಳ ಸ್ಮರಣಾರ್ಥ ತಿಂಗಳೊಂದರಲ್ಲೇ ಬೃಹತ್ ರಕ್ತದಾನ ಶಿಬಿರ ತೊಕ್ಕೊಟ್ಟಿನಲ್ಲಿ ನಡೆದಿದ್ದು, ಅಗಲಿದ ಸಿಬ್ಬಂದಿಯ ಮೇಲೆ ಮಾಲಕರು ತೋರಿದ ಪ್ರೀತಿ, ಗೌರವಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯಲ್ಲಿ ಕಳೆದ 15 ವರುಷದಿಂದ ಉದ್ಯೋಗಿಯಾಗಿದ್ದ ಇಲ್ಯಾಸ್ ಮಹಮ್ಮದ್ ಅವರು ಕಳೆದ ತಿಂಗಳ 24 ರಂದು ಸಂಜೆ ಮಾವಿನ ಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಹೈಟೆನ್ಷನ್ ತಂತಿ ತಗುಲಿ ಮರದಲ್ಲೇ ದಾರಣ ಸಾವನ್ನಪ್ಪಿದ್ದರು. ಅಗಲಿದ ಪ್ರೀತಿಯ ಉದ್ಯೋಗಿಯ ಸ್ಮರಣಾರ್ಥವಾಗಿ ಸಾಗರ್ ಕಲೆಕ್ಷನ್ ತೊಕ್ಕೊಟ್ಟು, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮತ್ತು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯ ರಕ್ತನಿಧಿ ಸಂಸ್ಥೆಯವರು ಜೊತೆ ಸೇರಿ ಇಂದು ತೊಕ್ಕೊಟ್ಟಿನಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು. ಶಿಬಿರದಲ್ಲಿ ಅನೇಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ರಕ್ತದಾನ ಮಾಡುವಂತೆ ಪ್ರೇರೇಪಿಸಲು ರಕ್ತದಾನಿಗಳಿಗೆ ಆಕರ್ಷಕ ಉಡುಗೊರೆಯನ್ನೂ ನೀಡಲಾಯಿತು.


ಸಾಗರ್ ಕಲೆಕ್ಷನ್ಸ್ ಪಾಲುದಾರ ಅಬ್ದುಲ್ ರಹಿಮಾನ್ ಮಾತನಾಡಿ ಇಲ್ಯಾಸ್ ಅವರು ಸ್ನೇಹಜೀವಿಯಲ್ಲದೆ, ಪರೋಪಕಾರಿಯಾಗಿದ್ದರು. ಅವರ ಹೆಸರಲ್ಲೇ ಜಾತಿ, ಧರ್ಮ ಮೀರಿ ಸಮಾಜಕ್ಕೆ ಅತ್ಯಗತ್ಯ ಇರುವ ರಕ್ತವನ್ನ ಕ್ರೋಢೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಹೇಳಿದರು.


ಸ್ಥಳೀಯ ಶಾಸಕ ಯು.ಟಿ ಖಾದರ್, ಉಳ್ಳಾಲ ದರ್ಗಾ ಅಧ್ಯಕ್ಷ ರಶೀದ್ ಹಾಜಿ, ಮಂಗಳೂರು ನಗರ ಡಿಸಿಪಿ ದಿನೇಶ್ ಕುಮಾರ್, ಬಿಜೆಪಿ ಮುಖಂಡ ಚಂದ್ರಹಾಸ್ ಉಳ್ಳಾಲ್, ಸಾಗರ್ ಕಲೆಕ್ಷನ್ ಪಾಲುದಾರ ಇಸ್ಮಾಯಿಲ್, ಸಮಾಜ ಸೇವಕರಾದ ಝಾಕಿರ್ ಇಕ್ಲಾಸ್ ಮೊದಲಾವರು ಉಪಸ್ಥಿತರಿದ್ದರು.
Ullal Youth dies of electrocution, family conduct mass blood camp on the day of his death anniversary.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm