ಬ್ರೇಕಿಂಗ್ ನ್ಯೂಸ್
25-07-22 10:26 pm Mangalore Correspondent ಕರಾವಳಿ
ಪುತ್ತೂರು, ಜುಲೈ 25 : ಕೃಷಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಆಲಂಕಾರಿನ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಹಾಗು ಆಡಳಿತ ಮಂಡಳಿ ಸದಸ್ಯರು ಉತ್ತರ ಭಾರತಕ್ಕೆ ಮೋಜಿನ ಟೂರ್ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಆರೋಪ ಮಾಡಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಬ ತಾಲೂಕಿನ ಅಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಉತ್ತರ ಭಾರತಕ್ಕೆ ಅಧ್ಯಯನ ಪ್ರವಾಸ ಹೋಗಿದ್ದಾರೆ. ಆದರೆ ಪ್ರವಾಸಕ್ಕೆ ಸಹಕಾರಿ ಸಂಘದ ಸದಸ್ಯರಲ್ಲದೆ, ಅವರ ಕುಟುಂಬದ ಸದಸ್ಯರನ್ನೂ ಕರೆದೊಯ್ದಿದ್ದರು. ಸೊಸೈಟಿ ದುಡ್ಡಿನಲ್ಲಿ ಪತಿ- ಪತ್ನಿಯರು ಮೋಜು ನಡೆಸಿ ಬಂದಿದ್ದಾರೆ. ಅದರ ಫೋಟೊಗಳು ಕೂಡ ವೈರಲ್ ಆಗಿವೆ ಎಂದು ಹೇಳಿದ್ದಾರೆ.



ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತದ ಪುಣ್ಯಕ್ಷೇತ್ರ ಹಾಗು ಪ್ರವಾಸಿ ತಾಣಗಳನ್ನು ಸುತ್ತಾಡಿದ್ದು ಬಿಟ್ಟರೆ ಕೃಷಿಗೆ ಸಂಬಂಧಪಟ್ಟ ಯಾವುದೇ ಅಧ್ಯಯನವನ್ನು ನಡೆಸಿಲ್ಲ. ಕೃಷಿಕರ ದುಡ್ಡಿನಲ್ಲಿ ನಡೆಯುತ್ತಿರುವ ಸಹಕಾರಿ ಸಂಘ. ಆದರೆ ಇವರು ಕುತುಬ್ ಮಿನಾರ್ ಇನ್ನಿತರ ಪ್ರವಾಸಿ ತಾಣಗಳಿಗೆ ಹೋಗಿದ್ದಾರೆ. ಇವರ ಮೋಜಿನ ಪ್ರವಾಸಕ್ಕೆ ಸೊಸೈಟಿ ದುಡ್ಡನ್ನು ಹೇಗೆ ಬಳಸಿದ್ದಾರೆ ಎನ್ನುವ ಬಗ್ಗೆ ಕೃಷಿಕರು ಕೇಳುತ್ತಿದ್ದಾರೆ. ಒಂದು ವ್ಯವಸ್ಥೆಯನ್ನು ಹಾಳು ಗೆಡವುತ್ತಿರುವುದರ ಪ್ರತೀಕ ಈ ರೀತಿಯ ಮೋಜಿನ ಪ್ರವಾಸ. ಕೃಷಿಕರ ದುಡ್ಡನ್ನು ಪೋಲು ಮಾಡುತ್ತಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಆಪ್ ಪದಾಧಿಕಾರಿಗಳಾದ ಜನಾರ್ಧನ ಬಂಗೇರ, ಡಾ ವಿಷುಕುಮಾರ್ ಇದ್ದರು.
Puttur AAP sams Kadaba horticulture department director and members for making tour out state in peoples money.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm