ಬ್ರೇಕಿಂಗ್ ನ್ಯೂಸ್
27-07-22 09:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 27: ನಾವು ಮನೆಯ ಮಗನನ್ನು ಕಳೆದುಕೊಂಡಿದ್ದೇವೆ. ಘಟನೆ ಖಂಡಿಸಲು ನಮ್ಮಲ್ಲಿ ಪದಗಳಿಲ್ಲ. ಪ್ರಕರಣದಲ್ಲಿ ಈಗಾಗಲೇ ಒಂಬತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಕಾನೂನು ಚೌಕಟ್ಟಿನಲ್ಲಿ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾರ್ಯಕರ್ತರ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೇಳಿಕೆ ಬಿಡುಗಡೆ ಮಾಡಿರುವ ಸುನಿಲ್ ಕುಮಾರ್, ದೇಶದಲ್ಲಿ ಜಿಹಾದಿ ಮಾನಸಿಕತೆ ಹಬ್ಬುತ್ತಿದ್ದು ಅದರ ಪರಿಣಾಮವನ್ನು ನಾವು ನೋಡುತ್ತಿದ್ದೇವೆ. ಅದನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತವೆ. ನಾನೂ ಹಿಂದೂ ಸಂಘಟನೆಯಲ್ಲೇ ಬೆಳೆದು ಸಾರ್ವಜನಿಕ ಜೀವನಕ್ಕೆ ಬಂದವನು. ಕಾರ್ಯಕರ್ತನನ್ನು ಕಳೆದುಕೊಂಡಾಗ ಮತ್ತೊಬ್ಬ ಕಾರ್ಯಕರ್ತನಿಗೆ ಆಗುವ ಆಕ್ರೋಶ ನನಗೆ ಅರಿವಿದೆ. ಈ ರೀತಿಯ ಆಕ್ರೋಶವನ್ನು ನಾನೂ ಅನುಭವಿಸಿದ್ದೇನೆ.

ಆದರೆ ಕೊಲೆ ಮಾಡಿದ ಜಿಹಾದಿಗಳನ್ನು ಬಗ್ಗುಬಡಿದೇ ಬಡಿಯುತ್ತೇವೆ. ಹಾಗೇ ಬಿಡೋದಿಲ್ಲ. ಪೊಲೀಸ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮುಖ್ಯಮಂತ್ರಿಗಳಿಗೂ ನಿರಂತರ ಮಾಹಿತಿ ನೀಡುತ್ತಿದ್ದೇನೆ. ಮುಂದಿನೆರಡು ದಿನ ಮಂಗಳೂರಿನಲ್ಲೇ ಇದ್ದು ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ, ಸಾರ್ವಜನಿಕ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇವೆ. ದೇಶದ ಉತ್ತರದಿಂದ ದಕ್ಷಿಣ ತುದಿ ವರೆಗೆ ನಡೆಯುತ್ತಿರುವ ಜಿಹಾದಿ ಮಾನಸಿಕತೆಯೇ ಪ್ರವೀಣ್ ಕೊಲೆಗೆ ಕಾರಣ. ಇದೇ ಜಿಹಾದಿ ಮಾನಸಿಕತೆಯೇ ಪ.ಬಂಗಾಳ, ಕೇರಳದಲ್ಲಿ ಕಾರ್ಯಕರ್ತರನ್ನು ಬಲಿ ಪಡೆಯುತ್ತಿದೆ.
ಹಾಗಂತ, ಪ್ರವೀಣ್ ಕೊಲೆ ವಿಚಾರವನ್ನು ಚುನಾವಣೆ ವಿಷಯವಾಗಿಸೋದಿಲ್ಲ. ಚುನಾವಣೆಗೆ ಬೇಕಾದ ವಿಷಯಗಳೇ ಬೇರೆ ಇದೆ. ಪ್ರವೀಣ್ ಕೊಲೆಯನ್ನು ಚುನಾವಣಾ ವಿಷಯ ಮಾಡುವ ಇರಾದೆ ಬಿಜೆಪಿಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
Jihadhi mindset is the reason for Praveens murder in Bellare, says Minister Sunil Kumar
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm