ಬ್ರೇಕಿಂಗ್ ನ್ಯೂಸ್
27-07-22 09:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 27: ನಾವು ಮನೆಯ ಮಗನನ್ನು ಕಳೆದುಕೊಂಡಿದ್ದೇವೆ. ಘಟನೆ ಖಂಡಿಸಲು ನಮ್ಮಲ್ಲಿ ಪದಗಳಿಲ್ಲ. ಪ್ರಕರಣದಲ್ಲಿ ಈಗಾಗಲೇ ಒಂಬತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಕಾನೂನು ಚೌಕಟ್ಟಿನಲ್ಲಿ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾರ್ಯಕರ್ತರ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೇಳಿಕೆ ಬಿಡುಗಡೆ ಮಾಡಿರುವ ಸುನಿಲ್ ಕುಮಾರ್, ದೇಶದಲ್ಲಿ ಜಿಹಾದಿ ಮಾನಸಿಕತೆ ಹಬ್ಬುತ್ತಿದ್ದು ಅದರ ಪರಿಣಾಮವನ್ನು ನಾವು ನೋಡುತ್ತಿದ್ದೇವೆ. ಅದನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತವೆ. ನಾನೂ ಹಿಂದೂ ಸಂಘಟನೆಯಲ್ಲೇ ಬೆಳೆದು ಸಾರ್ವಜನಿಕ ಜೀವನಕ್ಕೆ ಬಂದವನು. ಕಾರ್ಯಕರ್ತನನ್ನು ಕಳೆದುಕೊಂಡಾಗ ಮತ್ತೊಬ್ಬ ಕಾರ್ಯಕರ್ತನಿಗೆ ಆಗುವ ಆಕ್ರೋಶ ನನಗೆ ಅರಿವಿದೆ. ಈ ರೀತಿಯ ಆಕ್ರೋಶವನ್ನು ನಾನೂ ಅನುಭವಿಸಿದ್ದೇನೆ.

ಆದರೆ ಕೊಲೆ ಮಾಡಿದ ಜಿಹಾದಿಗಳನ್ನು ಬಗ್ಗುಬಡಿದೇ ಬಡಿಯುತ್ತೇವೆ. ಹಾಗೇ ಬಿಡೋದಿಲ್ಲ. ಪೊಲೀಸ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮುಖ್ಯಮಂತ್ರಿಗಳಿಗೂ ನಿರಂತರ ಮಾಹಿತಿ ನೀಡುತ್ತಿದ್ದೇನೆ. ಮುಂದಿನೆರಡು ದಿನ ಮಂಗಳೂರಿನಲ್ಲೇ ಇದ್ದು ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ, ಸಾರ್ವಜನಿಕ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇವೆ. ದೇಶದ ಉತ್ತರದಿಂದ ದಕ್ಷಿಣ ತುದಿ ವರೆಗೆ ನಡೆಯುತ್ತಿರುವ ಜಿಹಾದಿ ಮಾನಸಿಕತೆಯೇ ಪ್ರವೀಣ್ ಕೊಲೆಗೆ ಕಾರಣ. ಇದೇ ಜಿಹಾದಿ ಮಾನಸಿಕತೆಯೇ ಪ.ಬಂಗಾಳ, ಕೇರಳದಲ್ಲಿ ಕಾರ್ಯಕರ್ತರನ್ನು ಬಲಿ ಪಡೆಯುತ್ತಿದೆ.
ಹಾಗಂತ, ಪ್ರವೀಣ್ ಕೊಲೆ ವಿಚಾರವನ್ನು ಚುನಾವಣೆ ವಿಷಯವಾಗಿಸೋದಿಲ್ಲ. ಚುನಾವಣೆಗೆ ಬೇಕಾದ ವಿಷಯಗಳೇ ಬೇರೆ ಇದೆ. ಪ್ರವೀಣ್ ಕೊಲೆಯನ್ನು ಚುನಾವಣಾ ವಿಷಯ ಮಾಡುವ ಇರಾದೆ ಬಿಜೆಪಿಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
Jihadhi mindset is the reason for Praveens murder in Bellare, says Minister Sunil Kumar
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm