ಬ್ರೇಕಿಂಗ್ ನ್ಯೂಸ್
28-07-22 05:41 pm Mangalore Correspondent ಕರಾವಳಿ
Photo credits : NEWS FIRST
ಸುಳ್ಯ, ಜುಲೈ 28: ನಿಮ್ಮ ಮಗಳಿಗೆ ಈ ಗತಿ ಆಗುತ್ತಿದ್ದರೆ, ನೀವು ಎರಡು ದಿನ ಬಿಟ್ಟು ಬರುತ್ತಿದ್ರಾ.. ನೀವು ಎರಡು ದಿನ ಕಳೆದು ನಮ್ಮ ಮನೆಗೆ ಬಂದಿದ್ದೀರಲ್ಲಾ.. ನೀವ್ಯಾಕೆ ಬಂದ್ರಿ.. ಎಂದು ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪತ್ನಿ, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
ಎರಡು ದಿನಗಳ ಬಳಿಕ ಪ್ರವೀಣ್ ಮನೆಗೆ ಭೇಟಿಯಿತ್ತ ಶಾಸಕ ಮಠಂದೂರು ಅವರನ್ನು ಮನೆಯವರು ಮತ್ತು ಕುಟುಂಬಸ್ಥರು ತೀವ್ರ ತರಾಟೆಗೆತ್ತಿಕೊಂಡರು. ಪಕ್ಷ ಪಕ್ಷ ಅಂತ ದಿನದ 24 ಗಂಟೆಯೂ ಓಡುತ್ತಿದ್ದರು. ಅಂಗಾರಣ್ಣ ಅಂತಾ ಅವರ ಹಿಂದೆ ಓಡುತ್ತಿದ್ದರು. ಕುಂಜಾಡಿಯ ಮನೆಯಲ್ಲಿ ಏನೇ ಕಾರ್ಯಕ್ರಮ ಆದರೂ ನಳಿನಣ್ಣ ಅಂತ ಓಡುತ್ತಿದ್ದರು. ನನ್ನನ್ನು ಅರ್ಧದಲ್ಲಿ ಬಿಟ್ಟು ಕುಂಜಾಡಿಗೆ ಅಂತ ಹೋಗುತ್ತಿದ್ದರು. ಈಗ ಎಲ್ಲಿದ್ದಾರೆ ನಿಮ್ಮ ನಳಿನಣ್ಣ ಎಂದು ಪ್ರವೀಣ್ ಪತ್ನಿ ಪ್ರಶ್ನಿಸಿದರೆ, ಅಲ್ಲಿದ್ದ ಯಾರಿಗೂ ಮಾತು ಹೊರಡಲಿಲ್ಲ.


ಅಳುತ್ತಲೇ ಪ್ರವೀಣ್ ಪತ್ನಿ ಶಾಸಕರನ್ನು ಪ್ರಶ್ನೆ ಮಾಡಿದರು. ನಿಮ್ಮ ಪರಿಹಾರದ ಹಣ ನನಗೆ ಬೇಡ. ಹೋದವರನ್ನು ಮತ್ತೆ ಜೀವ ಮಾಡಲು ಆಗುವುದಿಲ್ಲ. ಆದರೆ ಅವರನ್ನು ಹತ್ಯೆ ಮಾಡಿದವರನ್ನಾದ್ರೂ ಬಂಧಿಸಲು ನಿಮ್ಮಿಂದ ಆಯಿತೇ.. ನಳಿನ್ ಗೆ ಆಯಿತೇ.. ನಿನ್ನೆ ಬೆಳ್ಳಾರೆಗೆ ಬಂದು ಪೋಸು ಕೊಟ್ಟರಲ್ಲ. ಅಲ್ಲಿಂದ ಓಡಿ ಹೋದರಲ್ಲಾ.. ಅವರು ಅಲ್ಲಿಗೆ ಬಂದಿದ್ದಕ್ಕೇ ಗಲಾಟೆ ಆಯ್ತು.. ಅವರು ಅಲ್ಲಿ ಯಾಕೆ ಹೋಗಿದ್ದು ಇಲ್ಲಿ ಮನೆಗೆ ಬರಬಹುದಿತ್ತಲ್ಲ ಎಂದು ತೀವ್ರ ತರಾಟೆಗೆತ್ತಿಕೊಂಡರು ಪ್ರವೀಣ್ ಪತ್ನಿ.

ಇದೇ ವೇಳೆ, ಅಲ್ಲಿದ್ದ ಸಂಬಂಧಿಕರು ನಾಯಕರು ಈಗ ಯಾಕೆ ಇಲ್ಲಿಗೆ ಬರುವುದು. ಫೋಟೋ ತೆಗೆಯುವುದಕ್ಕಾಗಿಯೇ.. ನಾವು ಹೋಗಿದ್ದೇವೆ ಎಂದು ಪೇಪರಲ್ಲಿ ಫೋಟೋ ಕೊಡುವುದಕ್ಕೆ ಬರ್ತೀರಾ.. ನೀವು ಯಾಕೆ ಈಗ ಬಂದ್ರಿ.. ನಾವು ನಿಮ್ಮ ಕ್ಷೇತ್ರದ ಕಾರ್ಯಕರ್ತರು. ನಿಮಗೆ ನಿನ್ನೆ ಬೆಳಗ್ಗೆ ಪುತ್ತೂರಲ್ಲಿ ಕಾದೆವು. ನೀವು ಮೊನ್ನೆ ರಾತ್ರಿ ಬೆಂಗಳೂರಲ್ಲಿದ್ದರೆ, ಬೆಳಗ್ಗೆ ಬರಬಹುದಿತ್ತಲ್ಲ. ನಿಮಗೆ ರಸ್ತೆಯಲ್ಲಿ ಬರೋಕೆ ಆಗಲ್ವಾ.. ವಿಮಾನ ಆಗಬೇಕೇ ಎಂದು ನೇರಾ ನೇರ ಪ್ರಶ್ನೆ ಮಾಡಿದ್ದಾರೆ. ಸಂಜೀವ ಮಠಂದೂರು ಯಾವುದೇ ಸಮಜಾಯಿಷಿ ಹೇಳುವುದಕ್ಕೂ ಬಿಡಲಿಲ್ಲ.
Bellare Praveen murder, Sanjeeva Matandoor slammed by Praveens wife and family. My husband who worked so much for the party in return had to die brutally. He was so much loving Angara but did he even come to see his face. What did Nalin Kateel do in return?. They also alleged that why can't get yogis rule in Karnataka.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm