ಬ್ರೇಕಿಂಗ್ ನ್ಯೂಸ್
29-07-22 08:11 pm Mangalore Correspondent ಕರಾವಳಿ
ಮಂಗಳೂರು, ಜು.29 : ದ.ಕ. ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆಗಳಿಂದಾಗಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಉದ್ವಿಗ್ನತೆಯಿಂದ ಕೂಡಿದೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಶಾಂತಿ ಸುವ್ಯವಸ್ಥೆಗೆ ತೊಂದರೆಯುಂಟಾಗುವ ಸಾಧ್ಯತೆಗಳಿರುವುದರಿಂದ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಐಪಿಸಿ ಸೆಕ್ಷನ್ 144 ರಡಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.29ರಿಂದ ಆಗಸ್ಟ್ 1ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.
ಜಾರಿಗೊಂಡಿರುವ ನಿರ್ಬಂಧಗಳು ಇವು
ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರೆ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಜಿಲ್ಲೆಯಾದ್ಯಂತ ಜು.29ರಿಂದ ಆ.1ರ ವರೆಗೆ ಸಂಜೆ 6ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಮುಚ್ಚಬೇಕು.
ಜಿಲ್ಲೆಯಾದ್ಯಂತ ಮಾಲ್, ಚಿತ್ರಮಂದಿರಗಳು/ ಸಿನಿಮಾ ಹಾಲ್, ಪಬ್ಗಳನ್ನು ಜು.29ರಿಂದ ಆ.1ರ ವರೆಗೆ ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಮುಚ್ಚುವುದು. ಸಾರ್ವಜನಿಕರು ಮತ್ತು ಅವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ವಸತಿ ಸಮುಚ್ಚಯಗಳಿಂದ ಹೊರಬರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ತುರ್ತು ಸಂದರ್ಭಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅವಶ್ಯಕವೆಂದು ಕಂಡುಬಂದಲ್ಲಿ ಮಾತ್ರ ಬಸ್ಸು, ಆಟೋರಿಕ್ಷಾ ಮತ್ತು ಟ್ಯಾಕ್ಸಿ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ. ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ವಾಹನಗಳನ್ನು ಬಳಸಲು ಅವಕಾಶ ನೀಡಲಾಗಿದೆ. ಅನಗತ್ಯ ವಾಹನಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ.
ಜಿಲ್ಲೆಯಲ್ಲಿ ಎಲ್ಲಾ ಸಭೆ, ಸಮಾರಂಭಗಳನ್ನು, ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ, ಜಾತ್ರಗಳನ್ನು ಮುಂದೂಡಬೇಕು. ಜಿಲ್ಲೆಯಲ್ಲಿ ಈಗಾಗಲೇ ನಿಗದಿಪಡಿಸಿರುವ ಖಾಸಗಿ ಸಮಾರಂಭಗಳನ್ನು ಮುಂದೂಡುವುದು.
ಹೋಟೆಲ್, ಪಾರ್ಸೆಲ್ ವ್ಯವಸ್ಥೆ, ತುರ್ತು ವ್ಯವಸ್ಥೆಗಳಿಗೆ ಮಾತ್ರ ಅವಕಾಶವಿರುತ್ತದೆ. ಜಿಲ್ಲೆಯ ಎಲ್ಲಾ ಸಂಧ್ಯಾ ಕಾಲೇಜುಗಳಿಗೆ 2 ದಿನಗಳ ರಜೆ ಘೋಷಿಸಲಾಗಿದೆ. ಜಿಲ್ಲೆಯ ಇತರ ಎಲ್ಲಾ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾದಂಡಾಧಿಕಾರಿ ಡಾ.ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ.
Fazil Murder case in Surathkal, Mangalore Shops, malls, theaters and pubs to remain close from 6pm to 6am of August 1st orders DC Dr Rajendra Kumar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm