ಬ್ರೇಕಿಂಗ್ ನ್ಯೂಸ್
30-07-22 11:13 am Mangalore Correspondent ಕರಾವಳಿ
ಮಂಗಳೂರು, ಜುಲೈ 30 : ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿದೆ. ಕೊಟ್ಟಾರ, ಕೊಡಿಯಾಲಗುತ್ತು, ಬಳ್ಳಾಲಬಾಗ್ ಪ್ರದೇಶದಲ್ಲಿ ಮಳೆ ನೀರು ಬಂದಿದ್ದು ಜನರ ಸಂಚಾರಕ್ಕೆ ತೊಡಕಾಗಿದೆ.
ರಾತ್ರಿಯಿಡೀ ಭಾರೀ ಗುಡುಗು ಸಹಿತ ಮಳೆಯಾಗಿದೆ. ಮಂಗಳೂರು ನಗರ, ಸುರತ್ಕಲ್, ಮುಲ್ಕಿ ಭಾಗದಲ್ಲಿ ಹೆಚ್ಚು ಮಳೆಯಾದ ಮಾಹಿತಿಯಿದೆ. ಮಂಗಳೂರಿನ ಬಳ್ಳಾಲ್ ಬಾಗ್ ಪ್ರದೇಶ ಸಂಪೂರ್ಣ ಜಲಾವೃತಗೊಂಡಿತ್ರು. ಅಲ್ಲಿನ ಹಲವು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಜನಜೀವನಕ್ಕೆ ತೊಂದರೆಯಾಗಿತ್ತು. ಪಾಂಡೇಶ್ವರ ಶಿವನಗರ ಭಾಗದಲ್ಲಿ ಮನೆಗಳು ಜಲಾವೃತಗೊಂಡಿವೆ. ಕರಂಗಲ್ಪಾಡಿ, ಮಂಗಳೂರು ರೈಲ್ವೇ ನಿಲ್ದಾಣ , ಪಂಪ್ವೆಲ್ ಹೆದ್ದಾರಿ, ಅತ್ತಾವರ ಹೀಗೆ ಹಲವು ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ, ಮನೆಗಳಿಗೆ ನೀರು ನುಗ್ಗಿದ್ದು, ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರ ಸಾಧ್ಯವಾಗಲಿಲ್ಲ.
ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಮಂಗಳೂರು, ಮುಲ್ಕಿ - ಮೂಡುಬಿದಿರೆ, ಬಂಟ್ವಾಳ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಬೆಳಗ್ಗೆ ರಜೆ ಘೋಷಣೆ ಮಾಡಿದ್ದರು. ಅಲ್ಲದೆ, ಪುತ್ತೂರು, ಸುಳ್ಯ, ಬೆಳ್ತಂಗಡಿ ಭಾಗದಲ್ಲಿ ಆಯಾ ಶಿಕ್ಷಣಾಧಿಕಾರಿಗಳು ಪರಿಸ್ಥಿತಿ ನೋಡಿಕೊಂಡು ರಜೆ ನೀಡುವಂತೆ ಸೂಚಿಸಿದ್ದಾರೆ. ನಸುಕಿನಲ್ಲಿ ಭಾರೀ ಎನ್ನುವಂತೆ ಸುರಿದ ಮಳೆ ಬೆಳಗ್ಗೆ ಹೊತ್ತು ಸರಿಯುತ್ತಿದ್ದಂತೆ ಕಡಿಮೆಯಾಗಿದೆ. ಎಂಟು ಗಂಟೆ ನಂತರ ಪೂರ್ತಿ ಬಿಸಿಲು ಆವರಿಸಿದೆ. ಹೀಗಾಗಿ ನೆರೆ ನೀರು ಕೂಡ ಕಡಿಮೆಯಾಗಿದೆ. ಆದರೆ ಒಂದೇ ಮಳೆಗೆ ಈ ಪರಿ ನೀರು ಬಂದಿರುವುದು ಜನರನ್ನು ಆತಂಕಕ್ಕೆ ದೂಡಿದೆ.
Just one Heavy rain in Mangalore and it's flooded because of drain water overflow.#Smartcity@DCDK9 @MangaloreCity @varthabharati @janadhvani pic.twitter.com/PUat34IMQV
— Inzam Bajpe (@inzam_7) July 30, 2022
Heavy rains have been lashing in the district of Dakshina Kannada for the past 3 hours on Saturday July 30, including the city of Mangaluru. The roads inside the city are submerged. Heavy water-logging is witnessed is many areas. Motorists were seen struggling to move their vehicles through the submerged roads. Water also gushed into the premises of Mangaluru Central railway station.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm