ಬ್ರೇಕಿಂಗ್ ನ್ಯೂಸ್
30-07-22 11:53 am Mangalore Correspondent ಕರಾವಳಿ
ಉಳ್ಳಾಲ, ಜು.30 : ಉಳ್ಳಾಲ ನಗರಸಭೆ ವ್ಯಾಪ್ತಿಯ ಕಲ್ಲಾಪು ಪಟ್ಲ ಎಂಬಲ್ಲಿ ಗುಡ್ಡ ಪ್ರದೇಶವನ್ನ ಸಮತಟ್ಟು ಮಾಡಲಾಗಿದ್ದು ನಸುಕಿನಲ್ಲಿ ಸುರಿದ ಭಾರೀ ಮಳೆಗೆ ನೀರೆಲ್ಲ ಸ್ಥಳೀಯ 18 ಮನೆಗಳಿಗೆ ನುಗ್ಗಿ ಭಾರೀ ನಷ್ಟ ಉಂಟಾಗಿದೆ.
ಕಲ್ಲಾಪು ತಗ್ಗು ಪ್ರದೇಶವಾಗಿದ್ದು ನೇತ್ರಾವತಿ ನದಿ ಪಾತ್ರದಲ್ಲಿದೆ. ಇಲ್ಲಿ ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ಸ್ಥಳೀಯ ನಿವಾಸಿಗಳು ಪ್ರತೀ ವರ್ಷವೂ ಕೃತಕ ನೆರೆ ಅವಾಂತರಗಳನ್ನು ಅನುಭವಿಸುತ್ತಿದ್ದಾರೆ. ಜನಪ್ರತಿನಿಧಿಗಳು ಗಲ್ಲಿ, ಗಲ್ಲಿಗೆ ಸುಸಜ್ಜಿತ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಿದ್ದರೂ ನೀರು ಹರಿಯಲು ಸಮರ್ಪಕ ಚರಂಡಿಗಳನ್ನೇ ಒದಗಿಸಿಲ್ಲ. ಕಳೆದ ತಿಂಗಳಲ್ಲಿ ಸುರಿದ ಮೊದಲ ವರ್ಷಧಾರೆಗೆ ಕಲ್ಲಾಪು ಪ್ರದೇಶದ 50ಕ್ಕೂ ಹೆಚ್ಚು ಮನೆಗಳು ಕೃತಕ ನೆರೆಯಿಂದ ಜಲಾವೃತಗೊಂಡಿದ್ದವು.
ಇದೀಗ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಕಲ್ಲಾಪಿನ ಪಟ್ಲ, ಮುಡುಪ್ಪೋಡಿ ಪ್ರದೇಶದ ಸುಮಾರು 18 ಮನೆಗಳಿಗೆ ದಿಢೀರನೆ ನೀರು ನುಗ್ಗಿದ್ದು ಬೆಲೆ ಬಾಳುವ ಇನ್ವಾರ್ಟರ್, ರೆಫ್ರಿಜರೇಟರ್, ವಾಷಿಂಗ್ ಮೆಷಿನ್, ಪೀಠೋಪಕರಣಗಳು ಕೆಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಪಟ್ಲ, ಘಂಡಿ ಪ್ರದೇಶದ ಸ್ಥಳೀಯ ಕೌನ್ಸಿಲರ್ ಓರ್ವರಿಗೆ ಸೇರಿದ ಗುಡ್ಡ ಪ್ರದೇಶವನ್ನ ಸಮತಟ್ಟುಗೊಳಿಸಿದ್ದೇ ಈ ಅವಾಂತರಕ್ಕೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಗುಡ್ಡ ಪ್ರದೇಶ ಸಮತಟ್ಟುಗೊಳಿಸಿದ್ದರಿಂದ ಅಲ್ಲಿನ ನೀರು ಹರಿದು ಹೋಗಲು ಚರಂಡಿ ಇಲ್ಲದೆ ರಸ್ತೆ ಮತ್ತು ಮನೆಗಳ ಒಳಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.
ಮಳೆ ನೀರು ಅವಾಂತರ ಸೃಷ್ಟಿಸಿದ ಪ್ರದೇಶಗಳು ಮೂರು ನಗರ ಸದಸ್ಯರು ಪ್ರತಿನಿಧಿಸುವ ಕ್ಷೇತ್ರವಾಗಿದೆ. ಸ್ಥಳೀಯ ಕೌನ್ಸಿಲರ್ ಮುಶ್ತಾಕ್ ಪಟ್ಲ ಅವರು ಮಾತ್ರ ಸ್ಥಳಕ್ಕೆ ಗ್ರಾಮಕರಣಿಕೆ ಶ್ವೇತ ಅವರೊಂದಿಗೆ ಭೇಟಿ ನೀಡಿ ನೀರು ಹರಿದು ಹೋಗಲು ಜೆಸಿಬಿ ಯಂತ್ರದಿಂದ ಕಾಮಗಾರಿ ಆರಂಭಿಸಿದ್ದಾರೆ. ಸ್ಥಳಕ್ಕೆ ಭೇಟಿ ಕೊಡದೆ ಫೋನ್ ಕರೆಯನ್ನೂ ಸ್ವೀಕರಿಸದ ಕೌನ್ಸಿಲರ್ ಬಾಝಿಲ್ ಡಿಸೋಜ ಅವರಿಗೆ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ.
Thokottu Kallapu houses submerged with water, people face havoc after rains in Mangalore.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 08:52 pm
Mangalore Correspondent
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm