ಬ್ರೇಕಿಂಗ್ ನ್ಯೂಸ್
30-07-22 09:13 pm Mangalore Correspondent ಕರಾವಳಿ
ಸುಳ್ಯ, ಜುಲೈ 30 : ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಬೆಳ್ಳಾರೆಯಲ್ಲಿ ವರ್ಷದ ಹಿಂದೆ ಮುಸ್ಲಿಮರಿಗೆ ಸಡ್ಡು ಹೊಡೆದು ಕೋಳಿ ಅಂಗಡಿ ಆರಂಭಿಸಿದ್ದೂ ಪ್ರವೀಣ್ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗುವಂತಾಗಿತ್ತು ಅನ್ನೋದನ್ನು ಆತನ ಸ್ನೇಹಿತರು ಹೇಳುತ್ತಾರೆ.
ಪ್ರವೀಣ್ ನೆಟ್ಟಾರು ಅವರು ಒಂಬತ್ತು ತಿಂಗಳ ಹಿಂದೆ ಬೆಳ್ಳಾರೆಯಲ್ಲಿ 'ಅಕ್ಷಯ ಫಾರ್ಮ್ ಫ್ರೆಶ್ ಚಿಕನ್' ಎಂಬ ಕೋಳಿ ಅಂಗಡಿ ಆರಂಭಿಸಿದ್ದರು. ಉದ್ಯಮದಲ್ಲಿ ಅವರು ಯಶಸ್ವಿಯಾಗಿದ್ದು ಅಲ್ಲಿನ ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು ಎಂದು ಪ್ರವೀಣ್ ಅವರ ಮಾವನ ಮಗ ರಂಜಿತ್ ಹೇಳಿದ್ದಾರೆ.

ಅಲ್ಲದೆ, ಪ್ರವೀಣ್ ರಾಷ್ಟ್ರೀಯವಾದಿ ಚಿಂತನೆಗೆ ಸಂಬಂಧಿಸಿದ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು. ಇಂತಹ ಸಂದೇಶಗಳನ್ನು ಹಂಚಿಕೊಳ್ತಿದ್ದುದಕ್ಕೂ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದವು. ಕೆಲ ದಿನಗಳ ಹಿಂದೆಯೂ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದು, ಈ ಕುರಿತು ಪೊಲೀಸರಿಗೂ ಮಾಹಿತಿ ನೀಡಿದ್ದರು ಎಂದಿದ್ದಾರೆ.
ಇತ್ತೀಚೆಗೆ ಹಿಂದುಗಳು ಅನ್ಯಧರ್ಮೀಯರಿಂದ ಮಾಂಸ ಖರೀದಿಸಬಾರದು ಎಂಬ ಕುರಿತು ದೊಡ್ಡ ಮಟ್ಟದ ಅಭಿಯಾನ ನಡೆದಿತ್ತು. ಈ ಕುರಿತು ಸ್ಥಳೀಯರಲ್ಲಿ ಪ್ರವೀಣ್ ಜಾಗೃತಿ ಮೂಡಿಸುತ್ತಿದ್ದರು. ಹಿಂದೂಗಳು ಮೀನು ಮಾರಾಟ ನಡೆಸಲು, ಕೋಳಿ ಮಾಂಸದ ಮಳಿಗೆಗಳನ್ನು ಆರಂಭಿಸಲು ಹುರಿದುಂಬಿಸಿದ್ದರು. ಇದರಿಂದ ಪ್ರವೀಣ್ ಸ್ಥಳೀಯ ಕೆಲವರ ವಿರೋಧಕ್ಕೆ ಕಾರಣವಾಗಿದ್ದರು ಎಂದವರು ಹೇಳಿದರು.
ಬೆಳ್ಳಾರೆಯಲ್ಲಿ ಕೋಳಿ ಮಾಂಸದ ವ್ಯಾಪಾರ ಮೊದಲಿನಿಂದಲೂ ಅನ್ಯಧರ್ಮೀಯರ ಹತೋಟಿಯಲ್ಲಿತ್ತು. ಆದರೆ ಪ್ರವೀಣ್ ಅವರು ಸ್ವತಃ ಕೋಳಿ ವ್ಯಾಪಾರ ಆರಂಭಿಸಿ ಅವರಿಗೆ ಸೆಡ್ಡು ಹೊಡೆದಿದ್ದರು. ಯಾರು ಎಷ್ಟೇ ಅಡ್ಡಿಪಡಿಸಿದರೂ ಉದ್ಯಮದಲ್ಲಿ ಯಶಸ್ವಿಯೂ ಆಗಿದ್ದರು. ಇವರಿಂದ ಪ್ರೇರಣೆ ಪಡೆದು ಆಸುಪಾಸಿನಲ್ಲಿ ಅನೇಕ ಕಡೆ ಹಿಂದೂ ಯುವಕರು ಕೋಳಿ ವ್ಯಾಪಾರ ಆರಂಭಿಸಿದ್ದರು ಎಂದವರು ತಿಳಿಸಿದರು.
'ಈ ಕಾರಣಕ್ಕಾಗಿಯೇ ಪ್ರವೀಣ್ ಹತ್ಯೆ ನಡೆದಿರುವ ಸಾಧ್ಯತೆ ಅಧಿಕ. ಪೊಲೀಸರು ಈಗ ಬಂಧಿಸಿರುವ ಝಾಕೀರ್ ಮತ್ತು ಶಫೀಕ್ ಪ್ರಮುಖ ಆರೋಪಿಗಳಲ್ಲ. ಇವರ ಹಿಂದೆ ದೊಡ್ಡ ಜಾಲವಿದೆ ಎಂದು ರಂಜಿತ್ ಅನುಮಾನ ವ್ಯಕ್ತಪಡಿಸುತ್ತಾರೆ.
Praveen Bellare Murder was it due to his chicken shop set up, friends allege business was the reason.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am