ಬ್ರೇಕಿಂಗ್ ನ್ಯೂಸ್
30-07-22 09:13 pm Mangalore Correspondent ಕರಾವಳಿ
ಸುಳ್ಯ, ಜುಲೈ 30 : ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಬೆಳ್ಳಾರೆಯಲ್ಲಿ ವರ್ಷದ ಹಿಂದೆ ಮುಸ್ಲಿಮರಿಗೆ ಸಡ್ಡು ಹೊಡೆದು ಕೋಳಿ ಅಂಗಡಿ ಆರಂಭಿಸಿದ್ದೂ ಪ್ರವೀಣ್ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗುವಂತಾಗಿತ್ತು ಅನ್ನೋದನ್ನು ಆತನ ಸ್ನೇಹಿತರು ಹೇಳುತ್ತಾರೆ.
ಪ್ರವೀಣ್ ನೆಟ್ಟಾರು ಅವರು ಒಂಬತ್ತು ತಿಂಗಳ ಹಿಂದೆ ಬೆಳ್ಳಾರೆಯಲ್ಲಿ 'ಅಕ್ಷಯ ಫಾರ್ಮ್ ಫ್ರೆಶ್ ಚಿಕನ್' ಎಂಬ ಕೋಳಿ ಅಂಗಡಿ ಆರಂಭಿಸಿದ್ದರು. ಉದ್ಯಮದಲ್ಲಿ ಅವರು ಯಶಸ್ವಿಯಾಗಿದ್ದು ಅಲ್ಲಿನ ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು ಎಂದು ಪ್ರವೀಣ್ ಅವರ ಮಾವನ ಮಗ ರಂಜಿತ್ ಹೇಳಿದ್ದಾರೆ.

ಅಲ್ಲದೆ, ಪ್ರವೀಣ್ ರಾಷ್ಟ್ರೀಯವಾದಿ ಚಿಂತನೆಗೆ ಸಂಬಂಧಿಸಿದ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು. ಇಂತಹ ಸಂದೇಶಗಳನ್ನು ಹಂಚಿಕೊಳ್ತಿದ್ದುದಕ್ಕೂ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದವು. ಕೆಲ ದಿನಗಳ ಹಿಂದೆಯೂ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದು, ಈ ಕುರಿತು ಪೊಲೀಸರಿಗೂ ಮಾಹಿತಿ ನೀಡಿದ್ದರು ಎಂದಿದ್ದಾರೆ.
ಇತ್ತೀಚೆಗೆ ಹಿಂದುಗಳು ಅನ್ಯಧರ್ಮೀಯರಿಂದ ಮಾಂಸ ಖರೀದಿಸಬಾರದು ಎಂಬ ಕುರಿತು ದೊಡ್ಡ ಮಟ್ಟದ ಅಭಿಯಾನ ನಡೆದಿತ್ತು. ಈ ಕುರಿತು ಸ್ಥಳೀಯರಲ್ಲಿ ಪ್ರವೀಣ್ ಜಾಗೃತಿ ಮೂಡಿಸುತ್ತಿದ್ದರು. ಹಿಂದೂಗಳು ಮೀನು ಮಾರಾಟ ನಡೆಸಲು, ಕೋಳಿ ಮಾಂಸದ ಮಳಿಗೆಗಳನ್ನು ಆರಂಭಿಸಲು ಹುರಿದುಂಬಿಸಿದ್ದರು. ಇದರಿಂದ ಪ್ರವೀಣ್ ಸ್ಥಳೀಯ ಕೆಲವರ ವಿರೋಧಕ್ಕೆ ಕಾರಣವಾಗಿದ್ದರು ಎಂದವರು ಹೇಳಿದರು.
ಬೆಳ್ಳಾರೆಯಲ್ಲಿ ಕೋಳಿ ಮಾಂಸದ ವ್ಯಾಪಾರ ಮೊದಲಿನಿಂದಲೂ ಅನ್ಯಧರ್ಮೀಯರ ಹತೋಟಿಯಲ್ಲಿತ್ತು. ಆದರೆ ಪ್ರವೀಣ್ ಅವರು ಸ್ವತಃ ಕೋಳಿ ವ್ಯಾಪಾರ ಆರಂಭಿಸಿ ಅವರಿಗೆ ಸೆಡ್ಡು ಹೊಡೆದಿದ್ದರು. ಯಾರು ಎಷ್ಟೇ ಅಡ್ಡಿಪಡಿಸಿದರೂ ಉದ್ಯಮದಲ್ಲಿ ಯಶಸ್ವಿಯೂ ಆಗಿದ್ದರು. ಇವರಿಂದ ಪ್ರೇರಣೆ ಪಡೆದು ಆಸುಪಾಸಿನಲ್ಲಿ ಅನೇಕ ಕಡೆ ಹಿಂದೂ ಯುವಕರು ಕೋಳಿ ವ್ಯಾಪಾರ ಆರಂಭಿಸಿದ್ದರು ಎಂದವರು ತಿಳಿಸಿದರು.
'ಈ ಕಾರಣಕ್ಕಾಗಿಯೇ ಪ್ರವೀಣ್ ಹತ್ಯೆ ನಡೆದಿರುವ ಸಾಧ್ಯತೆ ಅಧಿಕ. ಪೊಲೀಸರು ಈಗ ಬಂಧಿಸಿರುವ ಝಾಕೀರ್ ಮತ್ತು ಶಫೀಕ್ ಪ್ರಮುಖ ಆರೋಪಿಗಳಲ್ಲ. ಇವರ ಹಿಂದೆ ದೊಡ್ಡ ಜಾಲವಿದೆ ಎಂದು ರಂಜಿತ್ ಅನುಮಾನ ವ್ಯಕ್ತಪಡಿಸುತ್ತಾರೆ.
Praveen Bellare Murder was it due to his chicken shop set up, friends allege business was the reason.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm