ಬ್ರೇಕಿಂಗ್ ನ್ಯೂಸ್
01-08-22 06:44 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 1 : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ದಿನಗಳ ಹಿಂದೆ ಕೇರಳದ ತಲಶ್ಶೇರಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಗೆ ತೆರಳಿದ್ದ ವಿಶೇಷ ತಂಡವೊಂದು ಬೆಂಗಳೂರಿನಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದು ಸುಳ್ಯಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನವಾಣೆ ನೇತೃತ್ವದ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಪ್ರವೀಣ್ ಹತ್ಯೆ ನಂತರ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು. ಕೇರಳ, ಗೋವಾ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಪೊಲೀಸರ ತಂಡ ತೆರಳಿ ಆರೋಪಿಗಳಿಗಾಗಿ ಬಲೆ ಬೀಸಿದ್ದವು. ಪ್ರಕರಣದಲ್ಲಿ ಇಬ್ಬರನ್ನು ಮಾತ್ರ ಬಂಧಿಸಿದ್ದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ. ಉಳಿದವರನ್ನು ಬಂಧನ ತೋರಿಸದೆ ವಶದಲ್ಲಿಟ್ಟುಕೊಂಡಿದ್ದಾರೆ.

ಆರೋಪಿಗಳನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು ಅವರಿಂದಲೇ ಮಾಹಿತಿ ಸಂಗ್ರಹಿಸಿ ಪ್ರಕರಣದ ಜಾಡು ಹತ್ತಿದ್ದಾರೆ. ಇದೇ ವೇಳೆ, ಬೆಂಗಳೂರಿನ ಎನ್ಐಎ ಅಧಿಕಾರಿಗಳ ತಂಡ ಸುಳ್ಯಕ್ಕೆ ಆಗಮಿಸಿದ್ದು ಮಾಹಿತಿ ಸಂಗ್ರಹ ಆರಂಭಿಸಿದೆ. ಅಧಿಕೃತವಾಗಿ ಪ್ರಕರಣ ಹಸ್ತಾಂತರ ಆಗದಿದ್ದರೂ, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಎನ್ಐಎ ತನಿಖೆ ಆರಂಭಿಸಿದೆ. ಸೋಮವಾರ ಸಂಜೆ ಅಧಿಕಾರಿಗಳ ತಂಡ ಖಾಸಗಿ ಸ್ಕಾರ್ಪಿಯೋ ವಾಹನದಲ್ಲಿ ಬೆಳ್ಳಾರೆಗೆ ಆಗಮಿಸಿದ್ದು ಕೊಲೆ ಕೃತ್ಯ ನಡೆದ ಜಾಗದ ಪರಿಶೀಲನೆ ನಡೆಸಿದೆ.
Praveen Bellare Murder, other two accused arrested from Bangalore, totally four have been arrested in this case. NIA who has arrived at Sullia has now started an investigation.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm