ಬ್ರೇಕಿಂಗ್ ನ್ಯೂಸ್
01-08-22 06:44 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 1 : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ದಿನಗಳ ಹಿಂದೆ ಕೇರಳದ ತಲಶ್ಶೇರಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಗೆ ತೆರಳಿದ್ದ ವಿಶೇಷ ತಂಡವೊಂದು ಬೆಂಗಳೂರಿನಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದು ಸುಳ್ಯಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನವಾಣೆ ನೇತೃತ್ವದ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಪ್ರವೀಣ್ ಹತ್ಯೆ ನಂತರ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು. ಕೇರಳ, ಗೋವಾ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಪೊಲೀಸರ ತಂಡ ತೆರಳಿ ಆರೋಪಿಗಳಿಗಾಗಿ ಬಲೆ ಬೀಸಿದ್ದವು. ಪ್ರಕರಣದಲ್ಲಿ ಇಬ್ಬರನ್ನು ಮಾತ್ರ ಬಂಧಿಸಿದ್ದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ. ಉಳಿದವರನ್ನು ಬಂಧನ ತೋರಿಸದೆ ವಶದಲ್ಲಿಟ್ಟುಕೊಂಡಿದ್ದಾರೆ.

ಆರೋಪಿಗಳನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು ಅವರಿಂದಲೇ ಮಾಹಿತಿ ಸಂಗ್ರಹಿಸಿ ಪ್ರಕರಣದ ಜಾಡು ಹತ್ತಿದ್ದಾರೆ. ಇದೇ ವೇಳೆ, ಬೆಂಗಳೂರಿನ ಎನ್ಐಎ ಅಧಿಕಾರಿಗಳ ತಂಡ ಸುಳ್ಯಕ್ಕೆ ಆಗಮಿಸಿದ್ದು ಮಾಹಿತಿ ಸಂಗ್ರಹ ಆರಂಭಿಸಿದೆ. ಅಧಿಕೃತವಾಗಿ ಪ್ರಕರಣ ಹಸ್ತಾಂತರ ಆಗದಿದ್ದರೂ, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಎನ್ಐಎ ತನಿಖೆ ಆರಂಭಿಸಿದೆ. ಸೋಮವಾರ ಸಂಜೆ ಅಧಿಕಾರಿಗಳ ತಂಡ ಖಾಸಗಿ ಸ್ಕಾರ್ಪಿಯೋ ವಾಹನದಲ್ಲಿ ಬೆಳ್ಳಾರೆಗೆ ಆಗಮಿಸಿದ್ದು ಕೊಲೆ ಕೃತ್ಯ ನಡೆದ ಜಾಗದ ಪರಿಶೀಲನೆ ನಡೆಸಿದೆ.
Praveen Bellare Murder, other two accused arrested from Bangalore, totally four have been arrested in this case. NIA who has arrived at Sullia has now started an investigation.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm