ಬ್ರೇಕಿಂಗ್ ನ್ಯೂಸ್
01-08-22 06:44 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 1 : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ದಿನಗಳ ಹಿಂದೆ ಕೇರಳದ ತಲಶ್ಶೇರಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಗೆ ತೆರಳಿದ್ದ ವಿಶೇಷ ತಂಡವೊಂದು ಬೆಂಗಳೂರಿನಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದು ಸುಳ್ಯಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನವಾಣೆ ನೇತೃತ್ವದ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಪ್ರವೀಣ್ ಹತ್ಯೆ ನಂತರ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು. ಕೇರಳ, ಗೋವಾ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಪೊಲೀಸರ ತಂಡ ತೆರಳಿ ಆರೋಪಿಗಳಿಗಾಗಿ ಬಲೆ ಬೀಸಿದ್ದವು. ಪ್ರಕರಣದಲ್ಲಿ ಇಬ್ಬರನ್ನು ಮಾತ್ರ ಬಂಧಿಸಿದ್ದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ. ಉಳಿದವರನ್ನು ಬಂಧನ ತೋರಿಸದೆ ವಶದಲ್ಲಿಟ್ಟುಕೊಂಡಿದ್ದಾರೆ.
ಆರೋಪಿಗಳನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು ಅವರಿಂದಲೇ ಮಾಹಿತಿ ಸಂಗ್ರಹಿಸಿ ಪ್ರಕರಣದ ಜಾಡು ಹತ್ತಿದ್ದಾರೆ. ಇದೇ ವೇಳೆ, ಬೆಂಗಳೂರಿನ ಎನ್ಐಎ ಅಧಿಕಾರಿಗಳ ತಂಡ ಸುಳ್ಯಕ್ಕೆ ಆಗಮಿಸಿದ್ದು ಮಾಹಿತಿ ಸಂಗ್ರಹ ಆರಂಭಿಸಿದೆ. ಅಧಿಕೃತವಾಗಿ ಪ್ರಕರಣ ಹಸ್ತಾಂತರ ಆಗದಿದ್ದರೂ, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಎನ್ಐಎ ತನಿಖೆ ಆರಂಭಿಸಿದೆ. ಸೋಮವಾರ ಸಂಜೆ ಅಧಿಕಾರಿಗಳ ತಂಡ ಖಾಸಗಿ ಸ್ಕಾರ್ಪಿಯೋ ವಾಹನದಲ್ಲಿ ಬೆಳ್ಳಾರೆಗೆ ಆಗಮಿಸಿದ್ದು ಕೊಲೆ ಕೃತ್ಯ ನಡೆದ ಜಾಗದ ಪರಿಶೀಲನೆ ನಡೆಸಿದೆ.
Praveen Bellare Murder, other two accused arrested from Bangalore, totally four have been arrested in this case. NIA who has arrived at Sullia has now started an investigation.
22-06-25 12:36 pm
HK News Desk
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
22-06-25 10:58 am
HK News Desk
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm