ಬ್ರೇಕಿಂಗ್ ನ್ಯೂಸ್
02-08-22 10:03 pm udupi Correspondent ಕರಾವಳಿ
ಉಡುಪಿ, ಆಗಸ್ಟ್ 2 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ಅರ್ಪಿಸಿದ್ದಾರೆ.
ಪ್ರವೀಣ್ ಕೊಲೆಯಾದ ಬೆನ್ನಲ್ಲೇ ಪ್ರಕರಣದ ಬಗ್ಗೆ ಎನ್ಐಎ ತನಿಖೆ ನಡೆಸಿ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಕೂಡಲೇ ಅದಕ್ಕೆ ಪ್ರತಿಕ್ರಿಯಿಸಿದ್ದ ಅಮಿತ್ ಶಾ, ಪ್ರಕರಣದ ಬಗ್ಗೆ ಎನ್ಐಎ ತಂಡದಿಂದ ತನಿಖೆ ವಹಿಸಿಕೊಳ್ಳಲು ಸೂಚನೆ ನೀಡಿದ್ದರು.

ಮಂಗಳವಾರ ದೆಹಲಿಯ ಗೃಹ ಸಚಿವಾಲಯದ ಕಚೇರಿಯಲ್ಲಿ ಷಾ ಅವರನ್ನು ಭೇಟಿಯಾದ ಶೋಭಾ, ಕೇರಳದ ಗಡಿ ಪ್ರದೇಶಗಳಲ್ಲಿ ನಡೆಯುತ್ತಿರುವ ವಿದ್ರೋಹಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕೇರಳದ ತೀವ್ರಗಾಮಿ ಇಸ್ಲಾಮಿಸ್ಟ್ ಗುಂಪುಗಳು ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಸಕ್ರಿಯವಾಗಿದ್ದು ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುತ್ತಿವೆ. ಮಂಗಳೂರು ಪ್ರದೇಶದ ಕಾರ್ಯಕರ್ತರು ಇಸ್ಲಾಮಿಕ್ ಸಂಘಟನೆಗಳಿಂದ ತೀವ್ರ ನಲುಗಿದ್ದಾರೆ ಎಂಬುದಾಗಿ ಅಮಿತ್ ಷಾಗೆ ವಿವರಿಸಿದ್ದಾರೆ.

ಅಲ್ಲದೆ, ಇಸ್ಲಾಮಿಕ್ ಭಯೋತ್ಪಾದನೆಯನ್ನು ತಡೆಗಟ್ಟಲು ಮತ್ತು ಇಸ್ಲಾಮಿಕ್ ಉಗ್ರರ ಕರಿನೆರಳು ಹೊಂದಿರುವ ಮಂಗಳೂರಿನ ಮೇಲೆ ನಿಗಾ ಇಡಲು ಎನ್ಐಎ ಕಚೇರಿಯನ್ನು ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭಿಸುವಂತೆ ಅಮಿತ್ ಶಾಗೆ ಸಚಿವೆ ಶೋಭಾ ಮನವಿ ಮಾಡಿದ್ದಾರೆ.
Union minister of state Shobha Karandalaje met union home minister Amit Shah to thank him for handing over the investigation of Praveen Nettaru murder case to NIA. It may be recalled that Karandlaje had written to Shah seeking exemplary punishments to the perpetrators.Shobha Karandalaje, in her meeting with Amit Shah, apprised him of the radical activities taking place in the coastal regions of Karnataka bordering Kerala.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm