ಬ್ರೇಕಿಂಗ್ ನ್ಯೂಸ್
03-08-22 08:39 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3: ಕೋಮು ವೈಷಮ್ಯ, ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹೊರ ರಾಜ್ಯದ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಚಿಕ್ಕಮಗಳೂರು, ಉಡುಪಿ ಪೊಲೀಸರನ್ನು ಕೆಎಸ್ ಆರ್ ಪಿ ಜೊತೆಗೆ ಹೆಚ್ಚುವರಿಯಾಗಿ ಭದ್ರತಗೆ ನಿಯೋಜಿಸಲಾಗಿದೆ. ಆದರೆ ಇವರು ಊಟದ ವಿಚಾರದಲ್ಲಿ ಸುರತ್ಕಲ್ ಪೊಲೀಸ್ ಸಿಬಂದಿ ಜೊತೆಗೆ ಆಕ್ಷೇಪ ತೆಗೆದು ಬೈದುಕೊಂಡಿರುವ ವಿಡಿಯೋ ವೈರಲ್ ಆಗಿದೆ.
ಸುರತ್ಕಲ್ ಕ್ಯಾಂಪ್ ನಲ್ಲಿ ನಿಯೋಜನೆಗೊಂಡಿದ್ದ ಚಿಕ್ಕಮಗಳೂರು ಪೊಲೀಸರು ಊಟ ತಂದುಕೊಟ್ಟಿದ್ದ ಸುರತ್ಕಲ್ ಪೊಲೀಸ್ ಸಿಬಂದಿಗೆ ಬೈದಿದ್ದು ಊಟ ಚೆನ್ನಾಗಿಲ್ಲ, ಹಳಸಿದೆ ಎಂದು ಹೇಳಿ ನಿಂದಿಸಿದ್ದಾರೆ. ಊಟದ ವಿಚಾರದಲ್ಲಿ ಆರಂಭಗೊಂಡ ಮಾತು ಆಬಳಿಕ ಬೇರೆ ವಿಚಾರಕ್ಕೆ ತಿರುಗಿದ್ದು, ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಾರೆ. ಇದರ ವಿಡಿಯೋವನ್ನು ಒಬ್ಬರು ಸಿಬಂದಿಯೇ ಮಾಡಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ.


ಈ ಬಗ್ಗೆ ಸುರತ್ಕಲ್ ಇನ್ಸ್ ಪೆಕ್ಟರ್ ಚಂದ್ರಪ್ಪ ಬಳಿ ಕೇಳಿದಾಗ, ಊಟ ಚೆನ್ನಾಗಿತ್ತು. ಎಲ್ಲರಿಗೂ ಒಂದೇ ಕಡೆಯಿಂದ ಊಟ ಪೂರೈಕೆ ಮಾಡಲಾಗಿತ್ತು. ಎಲ್ಲ ಅಧಿಕಾರಿಗಳು, ಕೆಎಸ್ ಆರ್ ಪಿ ಸಿಬಂದಿ ಅದನ್ನೇ ಊಟ ಮಾಡಿದ್ದಾರೆ. ಊಟದ ಬಗ್ಗೆ ಕಂಪ್ಲೇಂಟ್ ಇರಲಿಲ್ಲ. ಚಿಕ್ಕಮಗಳೂರು ಪೊಲೀಸರು ಮಾತ್ರ ಆಕ್ಷೇಪ ತೆಗೆದಿದ್ದಾರೆ ಎಂದು ಹೇಳಿದರು. ಮಾಹಿತಿ ಪ್ರಕಾರ, ಊಟ ಚೆನ್ನಾಗಿಲ್ಲ, ಹಳಸಿದೆ ಎಂದು ಯಾರೋ ಕೇಳಿದ್ದಕ್ಕೆ, ನಾವು ದತ್ತಪೀಠಕ್ಕೆ ಬಂದಾಗ ಇದಕ್ಕಿಂತ ಒಳ್ಳೆ ಊಟ ಕೊಡುತ್ತೀರಾ ಎಂದು ಇಲ್ಲಿನ ಸಿಬಂದಿ ತಿರುಗೇಟು ನೀಡಿದ್ದಾರೆ. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದ್ದು, ಹಲವರು ಸೇರಿ ಬೈದಾಡಿಕೊಂಡಿದ್ದಾರೆ.


ಪ್ರತಿ ಬಾರಿ ಕೋಮು ಗಲಭೆಯ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹೊರ ಜಿಲ್ಲೆಗಳ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಸರಿಯಾದ ಸಂದರ್ಭದಲ್ಲಿ ಊಟ, ನೀರು ಸಿಗದ್ದಕ್ಕೆ ಕೆಲವೊಮ್ಮೆ ಪೊಲೀಸ್ ಸಿಬಂದಿ ಆಕ್ಷೇಪ ತೆಗೆಯುತ್ತಾರೆ. ಆದರೆ, ಇಲ್ಲಿ ಊಟದ ಜೊತೆಗೆ ಹಳೆ ವಿಚಾರವನ್ನು ಕೆದಕಿ ಬೈದುಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
Mangalore police constable and chikkamagalur police constables fighting over food alleging that spoilt food has been distributed goes viral on social media.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm