ಬ್ರೇಕಿಂಗ್ ನ್ಯೂಸ್
03-08-22 08:39 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3: ಕೋಮು ವೈಷಮ್ಯ, ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹೊರ ರಾಜ್ಯದ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಚಿಕ್ಕಮಗಳೂರು, ಉಡುಪಿ ಪೊಲೀಸರನ್ನು ಕೆಎಸ್ ಆರ್ ಪಿ ಜೊತೆಗೆ ಹೆಚ್ಚುವರಿಯಾಗಿ ಭದ್ರತಗೆ ನಿಯೋಜಿಸಲಾಗಿದೆ. ಆದರೆ ಇವರು ಊಟದ ವಿಚಾರದಲ್ಲಿ ಸುರತ್ಕಲ್ ಪೊಲೀಸ್ ಸಿಬಂದಿ ಜೊತೆಗೆ ಆಕ್ಷೇಪ ತೆಗೆದು ಬೈದುಕೊಂಡಿರುವ ವಿಡಿಯೋ ವೈರಲ್ ಆಗಿದೆ.
ಸುರತ್ಕಲ್ ಕ್ಯಾಂಪ್ ನಲ್ಲಿ ನಿಯೋಜನೆಗೊಂಡಿದ್ದ ಚಿಕ್ಕಮಗಳೂರು ಪೊಲೀಸರು ಊಟ ತಂದುಕೊಟ್ಟಿದ್ದ ಸುರತ್ಕಲ್ ಪೊಲೀಸ್ ಸಿಬಂದಿಗೆ ಬೈದಿದ್ದು ಊಟ ಚೆನ್ನಾಗಿಲ್ಲ, ಹಳಸಿದೆ ಎಂದು ಹೇಳಿ ನಿಂದಿಸಿದ್ದಾರೆ. ಊಟದ ವಿಚಾರದಲ್ಲಿ ಆರಂಭಗೊಂಡ ಮಾತು ಆಬಳಿಕ ಬೇರೆ ವಿಚಾರಕ್ಕೆ ತಿರುಗಿದ್ದು, ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಾರೆ. ಇದರ ವಿಡಿಯೋವನ್ನು ಒಬ್ಬರು ಸಿಬಂದಿಯೇ ಮಾಡಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ.


ಈ ಬಗ್ಗೆ ಸುರತ್ಕಲ್ ಇನ್ಸ್ ಪೆಕ್ಟರ್ ಚಂದ್ರಪ್ಪ ಬಳಿ ಕೇಳಿದಾಗ, ಊಟ ಚೆನ್ನಾಗಿತ್ತು. ಎಲ್ಲರಿಗೂ ಒಂದೇ ಕಡೆಯಿಂದ ಊಟ ಪೂರೈಕೆ ಮಾಡಲಾಗಿತ್ತು. ಎಲ್ಲ ಅಧಿಕಾರಿಗಳು, ಕೆಎಸ್ ಆರ್ ಪಿ ಸಿಬಂದಿ ಅದನ್ನೇ ಊಟ ಮಾಡಿದ್ದಾರೆ. ಊಟದ ಬಗ್ಗೆ ಕಂಪ್ಲೇಂಟ್ ಇರಲಿಲ್ಲ. ಚಿಕ್ಕಮಗಳೂರು ಪೊಲೀಸರು ಮಾತ್ರ ಆಕ್ಷೇಪ ತೆಗೆದಿದ್ದಾರೆ ಎಂದು ಹೇಳಿದರು. ಮಾಹಿತಿ ಪ್ರಕಾರ, ಊಟ ಚೆನ್ನಾಗಿಲ್ಲ, ಹಳಸಿದೆ ಎಂದು ಯಾರೋ ಕೇಳಿದ್ದಕ್ಕೆ, ನಾವು ದತ್ತಪೀಠಕ್ಕೆ ಬಂದಾಗ ಇದಕ್ಕಿಂತ ಒಳ್ಳೆ ಊಟ ಕೊಡುತ್ತೀರಾ ಎಂದು ಇಲ್ಲಿನ ಸಿಬಂದಿ ತಿರುಗೇಟು ನೀಡಿದ್ದಾರೆ. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದ್ದು, ಹಲವರು ಸೇರಿ ಬೈದಾಡಿಕೊಂಡಿದ್ದಾರೆ.


ಪ್ರತಿ ಬಾರಿ ಕೋಮು ಗಲಭೆಯ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹೊರ ಜಿಲ್ಲೆಗಳ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಸರಿಯಾದ ಸಂದರ್ಭದಲ್ಲಿ ಊಟ, ನೀರು ಸಿಗದ್ದಕ್ಕೆ ಕೆಲವೊಮ್ಮೆ ಪೊಲೀಸ್ ಸಿಬಂದಿ ಆಕ್ಷೇಪ ತೆಗೆಯುತ್ತಾರೆ. ಆದರೆ, ಇಲ್ಲಿ ಊಟದ ಜೊತೆಗೆ ಹಳೆ ವಿಚಾರವನ್ನು ಕೆದಕಿ ಬೈದುಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
Mangalore police constable and chikkamagalur police constables fighting over food alleging that spoilt food has been distributed goes viral on social media.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm