ಬ್ರೇಕಿಂಗ್ ನ್ಯೂಸ್
04-08-22 01:39 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಅಹಿತಕರ ಘಟನೆ ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುರ್ತಾಗಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿಸುತ್ತಿದ್ದಾರೆ ಎಂಬ ಮಾಹಿತಿ ನೆಲೆಯಲ್ಲಿ ಪುರುಷ ವ್ಯಕ್ತಿಗಳು ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗುವುದು. ಹೊಸ ನಿಯಮ ಆಗಸ್ಟ್ 5ರಿಂದಲೇ ಜಾರಿಗೆ ಬರಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಸಮಾಲೋಚನೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್, ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ನಾಳೆಯಿಂದಲೇ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಆದರೆ, ಈ ನಿಯಮದಿಂದ 18 ವರ್ಷದಿಂದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ವಿನಾಯ್ತಿ ನೀಡಲಾಗುವುದು ಎಂದು ಹೇಳಿದ್ದಾರೆ.

ಹಿಂಬದಿ ಸವಾರರಾಗಿ ಯುವಕರು ದ್ವಿಚಕ್ರ ವಾಹನದಲ್ಲಿ ತೆರಳುವಂತಿಲ್ಲ. ಸದ್ಯಕ್ಕೆ ಒಂದು ವಾರ ಅಥವಾ ಹತ್ತು ದಿವಸ ಈ ನಿಯಮ ಜಾರಿಯಲ್ಲಿರುತ್ತದೆ. ಹಿಂದೆ ಬೇರೆ ರಾಜ್ಯದಲ್ಲಿ ಈ ರೀತಿಯ ನಿಮಯ ಜಾರಿಗೆ ತರಲಾಗಿತ್ತು. ಕೇರಳದ ವಯನಾಡಿನಲ್ಲೂ ಈ ರೀತಿ ನಿಯಮ ತರಲಾಗಿತ್ತು. ಈ ರೀತಿ ಮಾಡುವುದರಿಂದ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯ ಎಸಗುವುದನ್ನು ತಡೆಗಟ್ಟಬಹುದು ಎಂದು ಎಡಿಜಿಪಿ ಹೇಳಿದ್ದಾರೆ. ಅಲ್ಲದೆ, ರಾತ್ರಿ ನಿರ್ಬಂಧ ಸಡಿಲಗೊಳಿಸುತ್ತೀರಾ ಎಂಬ ಪ್ರಶ್ನೆಗೆ, ಇಲ್ಲ. ಒಂದೇ ಬಾರಿಗೆ ನಿರ್ಬಂಧ ಸಡಿಲಿಸುವುದಿಲ್ಲ. ಅದರ ಸಮಯ ಮಿತಿಯನ್ನು ಸ್ವಲ್ಪ ಬದಲು ಮಾಡಲಾಗುವುದು. ರಾತ್ರಿ ನಿರ್ಬಂಧ ಮತ್ತು 144 ಸೆಕ್ಷನ್ ಮುಂದುವರಿಸಲಾಗುವುದು ಎಂದು ಹೇಳಿದರು.
ADGP Alok Kumar orders for No pillon riders on bike from August 5th in Mangalore to avoid untold incidents in Dakshina Kannada. As miscreants use bike for attacks and murder to prevent this this order has been placed as Mangalore witnessed three murders in 10 days time.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm