ಬ್ರೇಕಿಂಗ್ ನ್ಯೂಸ್
04-08-22 06:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಅಹಿತಕರ ಘಟನೆ ತಪ್ಪಿಸಲು ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಡಬಲ್ ರೈಡ್ ಹೋಗುವುದನ್ನು ನಿಷೇಧಿಸಿ ಹೊರಡಿಸಿದ ಆದೇಶವನ್ನು ದಿಢೀರ್ ಆಗಿ ಹಿಂಪಡೆಯಲಾಗಿದೆ. ಡಬಲ್ ರೈಡ್ ನಿಷೇಧಕ್ಕೆ ವ್ಯಾಪಕ ಜನ ವಿರೋಧ ಕೇಳಿಬರುತ್ತಿದ್ದಂತೆ ಮಂಗಳೂರು ಕಮಿಷನರ್ ಆದೇಶ ವಾಪಸ್ ಪಡೆದಿದ್ದಾರೆ.
ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ದ್ವಿಚಕ್ರ ವಾಹನದಲ್ಲಿ ಬಂದು ಅಪರಾಧ ಎಸಗುವುದು ಜಾಸ್ತಿ ಎಂಬ ನಿಟ್ಟಿನಲ್ಲಿ ಡಬಲ್ ರೈಡ್ ಸಂಚಾರವನ್ನು ನಿಷೇಧಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದರು. ಈ ಹೇಳಿಕೆಯ ವಿಚಾರದಲ್ಲಿ ಪರ- ವಿರೋಧ ಕೇಳಿಬಂದಿತ್ತು. ಅದಾದಬಳಿಕ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಈ ಕುರಿತು ಆದೇಶವನ್ನೂ ಹೊರಡಿಸಿದ್ದರು. ರಾತ್ರಿ ವೇಳೆಗೆ ಮಾತ್ರ ಹಿಂಬದಿ ಸವಾರಿ ನಿಷೇಧ ಎನ್ನುವ ಬಗ್ಗೆ ಆದೇಶದಲ್ಲಿ ತಿಳಿಸಲಾಗಿತ್ತು. ಆದರೆ ಜನಸಾಮಾನ್ಯರು ಹೆಚ್ಚಾಗಿ ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುವುದರಿಂದ ಜಿಲ್ಲೆಯಾದ್ಯಂತ ಈ ರೀತಿ ಆದೇಶ ಹೊರಡಿಸಿದ್ದು ಕೆಲವರ ಆಕ್ಷೇಪಕ್ಕೆ ಕಾರಣವಾಗಿತ್ತು.

ಆದರೆ, ಈ ಬಗ್ಗೆ ಒಂದೆಡೆ ಜನ ವಿರೋಧ ಕೇಳಿಬರುತ್ತಿದ್ದಂತೆ ಮೇಲಿನಿಂದ ಕರೆಯೂ ಬಂದಿದೆ ಎನ್ನಲಾಗುತ್ತಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ ಒಂದೇ ಗಂಟೆಯಲ್ಲಿ ಹಿಂಪಡೆದಿದ್ದಾರೆ. ಅಲ್ಲದೆ, ಈಗಾಗಲೇ ರಾತ್ರಿ 9ರ ವರೆಗೆ ವ್ಯಾಪಾರ ಮತ್ತು ಸಂಚಾರ ನಿರ್ಬಂಧವನ್ನು ಸಡಿಲಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಅದೇ ಪ್ರಕಾರದಲ್ಲಿ ರಾತ್ರಿ 9ರ ಬಳಿಕ ಪೂರ್ತಿ ಸಂಚಾರ ನಿರ್ಬಂಧ ಇರಲಿದೆ ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ.
ಅಹಿತಕರ ಘಟನೆ ತಪ್ಪಿಸಲು ದ್ವಿಚಕ್ರ ಹಿಂಬದಿ ಸವಾರಿಗೆ ನಿಷೇಧ ; ಜಿಲ್ಲೆಯಲ್ಲಿ ನಾಳೆಯಿಂದಲೇ ಹೊಸ ವ್ಯವಸ್ಥೆ !
Mangalore Male pillion riders not allowed for a week order taken back after public opposition largely on social media. Adgp Alok Kumar and Mangalore Commissioner beefing media stated that male pillion riders will not be allowed for a week in the city after the night curfew is revoked on August 5.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm