ಬ್ರೇಕಿಂಗ್ ನ್ಯೂಸ್
05-08-22 01:11 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 5 : ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ತಾಲೂಕಿನಲ್ಲಿ ನಾಲ್ಕು ಗ್ರಾಮಗಳ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ಹರಿಹರ, ಕೊಲ್ಲಮೊಗ್ರು, ಬಾಳುಗೋಡು ಹಾಗೂ ಕಲ್ಮಕಾರು ಗ್ರಾಮದಲ್ಲಿ ಜಲಸ್ಫೋಟ ಉಂಟಾಗಿದ್ದು, ಮನೆ, ಕೃಷಿ ಜಮೀನುಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.


ಸುಳ್ಯ ಹಾಗೂ ಕಡಬ ತಾಲೂಕಿನ ಕಾಳಜಿ ಕೇಂದ್ರಗಳಲ್ಲಿ ಒಟ್ಟು 58 ಮಂದಿ ಆಶ್ರಯ ಪಡೆದಿದ್ದಾರೆ. ಕಲ್ಮಕಾರು ಸಕಾ೯ರಿ ಪ್ರಾಥಮಿಕ ಶಾಲೆಯಲ್ಲಿ 21 ಮಂದಿ, ಸಂಪಾಜೆಯ ಸಜ್ಜನ ಪ್ರತಿಷ್ಠಾನದಲ್ಲಿ 12 ಮಂದಿ, ಸುಬ್ರಹ್ಮಣ್ಯದ ಅನಘಾ ವಸತಿಗೃಹದಲ್ಲಿ 13 ಮಂದಿ, ಯೇನೆಕಲ್ಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 6 ಮಂದಿ ಇದ್ದಾರೆ ಎಂದು ತಾಲ್ಲೂಕು ಆಡಳಿತ ಮಾಹಿತಿ ನೀಡಿದೆ.


ನಿರಂತರ ಮಳೆಯಿಂದಾಗಿ ಮಡಪ್ಪಾಡಿಯಲ್ಲಿ ಅಪಾರ ಹಾನಿ ಸಂಭವಿಸಿದೆ. ಮಡಪ್ಪಾಡಿಯ ಗೋಳಿಯಡಿ ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದು ಬ್ಲಾಕ್ ಆಗಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮಡಪ್ಪಾಡಿಯಿಂದ ಶೀರಡ್ಕ, ದೇರಮಜಲು ಸಂಪರ್ಕಿಸುವ ರಸ್ತೆಯಲ್ಲಿ ಅಂಬೆಕಲ್ಲು ಎಂಬಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆತಂಕದ ಪರಿಸ್ಥಿತಿ ಎದುರಾಗಿದೆ. ಹಾಡಿಕಲ್ಲು ಎಂಬಲ್ಲಿ ಸೇತುವೆ ಪಕ್ಕದ ಮಣ್ಣು ಕೊಚ್ಚಿ ಹೋಗಿದ್ದು, ಅಲ್ಲಿಯೇ ಮನೆಯೊಂದು ಕುಸಿವ ಭೀತಿಯಲ್ಲಿದೆ. ಪೂಂಬಾಡಿಯನ್ನು ಸಂಪರ್ಕಿಸುವ ಶೆಟ್ಟಿಮಜಲು ಸೇತುವೆ ಮುಳುಗಡೆಯಾಗಿ ತೋಟಗಳಿಗೆ ನೀರು ನುಗ್ಗಿದೆ. ಜಾಲುಮನೆ ಎಂಬಲ್ಲಿಯೂ ಸೇತುವೆಯ ಮಣ್ಣು ಕೊಚ್ಚಿ ಹೋಗಿದೆ.
Heavy rains in Sullia, 58 people transferred to a safer place. Wednesday extended holiday to some education institutes in Sullia taluk on Thursday, in view of continuing torrential rain in the taluk.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm