ಬ್ರೇಕಿಂಗ್ ನ್ಯೂಸ್
05-08-22 01:11 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 5 : ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ತಾಲೂಕಿನಲ್ಲಿ ನಾಲ್ಕು ಗ್ರಾಮಗಳ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ಹರಿಹರ, ಕೊಲ್ಲಮೊಗ್ರು, ಬಾಳುಗೋಡು ಹಾಗೂ ಕಲ್ಮಕಾರು ಗ್ರಾಮದಲ್ಲಿ ಜಲಸ್ಫೋಟ ಉಂಟಾಗಿದ್ದು, ಮನೆ, ಕೃಷಿ ಜಮೀನುಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.


ಸುಳ್ಯ ಹಾಗೂ ಕಡಬ ತಾಲೂಕಿನ ಕಾಳಜಿ ಕೇಂದ್ರಗಳಲ್ಲಿ ಒಟ್ಟು 58 ಮಂದಿ ಆಶ್ರಯ ಪಡೆದಿದ್ದಾರೆ. ಕಲ್ಮಕಾರು ಸಕಾ೯ರಿ ಪ್ರಾಥಮಿಕ ಶಾಲೆಯಲ್ಲಿ 21 ಮಂದಿ, ಸಂಪಾಜೆಯ ಸಜ್ಜನ ಪ್ರತಿಷ್ಠಾನದಲ್ಲಿ 12 ಮಂದಿ, ಸುಬ್ರಹ್ಮಣ್ಯದ ಅನಘಾ ವಸತಿಗೃಹದಲ್ಲಿ 13 ಮಂದಿ, ಯೇನೆಕಲ್ಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 6 ಮಂದಿ ಇದ್ದಾರೆ ಎಂದು ತಾಲ್ಲೂಕು ಆಡಳಿತ ಮಾಹಿತಿ ನೀಡಿದೆ.


ನಿರಂತರ ಮಳೆಯಿಂದಾಗಿ ಮಡಪ್ಪಾಡಿಯಲ್ಲಿ ಅಪಾರ ಹಾನಿ ಸಂಭವಿಸಿದೆ. ಮಡಪ್ಪಾಡಿಯ ಗೋಳಿಯಡಿ ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದು ಬ್ಲಾಕ್ ಆಗಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮಡಪ್ಪಾಡಿಯಿಂದ ಶೀರಡ್ಕ, ದೇರಮಜಲು ಸಂಪರ್ಕಿಸುವ ರಸ್ತೆಯಲ್ಲಿ ಅಂಬೆಕಲ್ಲು ಎಂಬಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆತಂಕದ ಪರಿಸ್ಥಿತಿ ಎದುರಾಗಿದೆ. ಹಾಡಿಕಲ್ಲು ಎಂಬಲ್ಲಿ ಸೇತುವೆ ಪಕ್ಕದ ಮಣ್ಣು ಕೊಚ್ಚಿ ಹೋಗಿದ್ದು, ಅಲ್ಲಿಯೇ ಮನೆಯೊಂದು ಕುಸಿವ ಭೀತಿಯಲ್ಲಿದೆ. ಪೂಂಬಾಡಿಯನ್ನು ಸಂಪರ್ಕಿಸುವ ಶೆಟ್ಟಿಮಜಲು ಸೇತುವೆ ಮುಳುಗಡೆಯಾಗಿ ತೋಟಗಳಿಗೆ ನೀರು ನುಗ್ಗಿದೆ. ಜಾಲುಮನೆ ಎಂಬಲ್ಲಿಯೂ ಸೇತುವೆಯ ಮಣ್ಣು ಕೊಚ್ಚಿ ಹೋಗಿದೆ.
Heavy rains in Sullia, 58 people transferred to a safer place. Wednesday extended holiday to some education institutes in Sullia taluk on Thursday, in view of continuing torrential rain in the taluk.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm