ಬ್ರೇಕಿಂಗ್ ನ್ಯೂಸ್
06-08-22 09:58 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6 : ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ, ಅತಿವೃಷ್ಠಿಯಿಂದಾಗಿ ಜನರು ತತ್ತರಿಸಿದ್ದಾರೆ. ಆದರೆ ರಾಜ್ಯ ಸರ್ಕಾರದಿಂದ ಜನರ ಕಣ್ಣೀರು ಒರೆಸುವ ಒಂದೇ ಒಂದು ಯೋಜನೆ ಇಲ್ಲ. ಕೇಂದ್ರದಿಂದ ಅನುದಾನ ಕೇಳುವುದಕ್ಕೂ ರಾಜ್ಯ ಸರ್ಕಾರಕ್ಕೆ ಧೈರ್ಯ ಇಲ್ಲ ಎಂದು ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮಳೆಯಿಂದಾಗಿ ನೂರಾರು ಮಂದಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯದ ನೊಂದ ಜನರನ್ನು ರಾಜ್ಯ ಸರಕಾರ ಅನಾಥರಾಗಿಸಿದೆ. ರಾಜ್ಯ ಸರ್ಕಾರ ಅತಿವೃಷ್ಟಿ, ಪ್ರಕೃತಿ ವಿಕೋಪ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಸಂಕಷ್ಟ ಎದುರಿಸುತ್ತಿರುವ ಜನರ ರಕ್ಷಣೆಗೆ ಸರ್ಕಾರ ಬರಲಿದೆ ಎಂಬ ವಿಶ್ವಾಸ ಜನರಿಗೇ ಇಲ್ಲವಾಗಿದೆ. ಸರಕಾರದ ಮೇಲೆ ಜನರು ಇಟ್ಟಿರುವ ವಿಶ್ವಾಸ ಕಳೆದುಕೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಬಂದರೂ ಸರ್ಕಾರ ಅವರಲ್ಲಿ ವಿಶೇಷ ಅನುದಾನ ಕೇಳಿಲ್ಲ. ಮಳೆಗೆ ಅನಾಹುತ ಆಗಿದ್ದರೂ ಅವರ ಗಮನಕ್ಕೂ ತರಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಎನ್ ಡಿ ಆರ್ ಎಫ್ ಫಂಡಿನಡಿ ಕೇಂದ್ರ ಸರಕಾರದಿಂದ ಅನುದಾನ ಕೇಳುವ ಧೈರ್ಯವೂ ರಾಜ್ಯದ ಬಿಜೆಪಿ ಸಂಸದರಿಗೆ, ರಾಜ್ಯ ಸರ್ಕಾರಕ್ಕೆ ಇಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಕೇಡುಗಾಲ ಬಂದಿದೆ ಎಂದು ಪಕ್ಷ ಉಳಿಸುವ ಕೆಲಸಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಜನರನ್ನು ಉಳಿಸುವ ಕೆಲಸಕ್ಕೆ ಸರಕಾರ ಮುಂದಾಗಿಲ್ಲ ಎಂದು ಹೇಳಿದರು.
ಯಾರೇ ಹತ್ಯೆಯಾದರೂ ಸರ್ಕಾರದಿಂದ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಬಾರದು ಎಂದು ಹೇಳಿದ ವಿಪಕ್ಷ ಉಪನಾಯಕ ಯು.ಟಿ ಖಾದರ್, ನಮ್ಮ ಸರ್ಕಾರ ಇದ್ದಾಗ ಸಮಾನ ಪರಿಹಾರ ಕೊಟ್ಟಿದ್ದೇವೆ. ಅಶ್ರಫ್ ಕಲಾಯಿ- ಶರತ್ ಮಡಿವಾಳ ಇಬ್ಬರಿಗೂ ಸಮಾನ ಪರಿಹಾರ ನೀಡಿದ್ದೇವೆ. ದೀಪಕ್ ರಾವ್ - ಬಷೀರ್ ಇಬ್ಬರಿಗೂ ಸಮಾನ ಪರಿಹಾರ ಕೊಡಲಾಗಿತ್ತು. ವೈಯಕ್ತಿಕ ದ್ವೇಷದ ಹಲ್ಲೆ ಆದಾಗ ಪರಿಹಾರ ಕೊಡದೇ ಇರಬಹುದು. ಆದರೆ ಕೋಮು ದ್ವೇಷದ ಹಲ್ಲೆಗಳ ಸಂದರ್ಭದಲ್ಲಿ ಒಂದೇ ರೀತಿ ಪರಿಹಾರ ನೀಡಲಾಗಿತ್ತು. ಮುಖ್ಯಮಂತ್ರಿಯವರೂ ಒಬ್ಬರ ಮನೆಗೆ ಹೋಗಿ ಇನ್ನೊಬ್ಬರ ಮನೆಗೆ ಹೋಗದೆ ತಾರತಮ್ಯ ಮಾಡಿಲ್ಲ ಎಂದರು.

ಮೊನ್ನೆ ಆಕ್ಷೇಪ ಬಂದ ಬಳಿಕ ಹತ್ಯೆಯಾದ ಎಲ್ಲರ ಮನೆಗೂ ಸಿಎಂ ಬರ್ತೇನೆ ಎಂದು ಹೇಳಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸುಳ್ಳು ಹೇಳಲ್ಲ ಎಂದು ಅಂದುಕೊಂಡಿದ್ದೇವೆ. ಪರಿಹಾರ ಕೊಡುವ ಬಗ್ಗೆ ಅಧಿಕಾರಿಗಳು ವರದಿ ಸಲ್ಲಿಸುತ್ತಾರೆ. ಕನಿಷ್ಠ ಮಾನವೀಯತೆ ದೃಷ್ಟಿಯಿಂದಾದರೂ ಮುಖ್ಯಮಂತ್ರಿ ಆ ಮನೆಗಳಿಗೆ ಹೋಗಬೇಕು. ಧರ್ಮದ ವಿಚಾರದಲ್ಲಿ ತಾರತಮ್ಯ ಮಾಡುವುದನ್ನು ಯಾವ ಧರ್ಮದವರು ಸಹ ಒಪ್ಪಲ್ಲ ಎಂದು ಯು.ಟಿ ಖಾದರ್ ಹೇಳಿದ್ದಾರೆ.
"Though the minister of Home Affairs had arrived in the state, neither the chief minister nor other ministers bothered to appeal to him to release grants to provide compensation to people affected by natural disasters or damages that took place due to flood that occurred in the state. Instead, they have discussed only their party issues," said MLA U T Khader.He was addressing a press meet at the circuit house on Saturday August 6.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm