ಬ್ರೇಕಿಂಗ್ ನ್ಯೂಸ್
08-08-22 09:42 pm Mangalore Correspondent ಕರಾವಳಿ
ಉಳ್ಳಾಲ, ಆ.8 : ಉಚ್ಚಿಲ, ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತ ಮತ್ತಷ್ಟು ತೀವ್ರಗೊಂಡಿದ್ದು ಕಡಲ ತೀರದಲ್ಲಿದ್ದ ಗೆಸ್ಟ್ ಹೌಸ್ ಕಟ್ಟಡವೊಂದು ಕಡೆಗೂ ಕಡಲು ಪಾಲಾಗಿದೆ.
ಈ ಬಾರಿಯ ಮಳೆಗಾಲ ಆರಂಭದಲ್ಲೇ ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿತ್ತು. ಬೀಚ್ ರಸ್ತೆಯನ್ನೇ ಕಡಲು ನುಂಗಿ ಹಾಕಿದ್ದು ತೀರದಲ್ಲಿರುವ ಬಹುತೇಕ ಮನೆಗಳು, ಗೆಸ್ಟ್ ಹೌಸ್ ಗಳು ಅಪಾದಂಚಿನಲ್ಲಿದ್ದವು. ಆಬಳಿಕ ಬಟ್ಟಪ್ಪಾಡಿ ಪ್ರದೇಶಕ್ಕೆ ಕಡಲ್ಕೊರೆತ ವೀಕ್ಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರ ದಂಡೇ ಆಗಮಿಸಿತ್ತು.

ಬಟ್ಟಂಪಾಡಿಯಲ್ಲಿ "ವಿಟಮಿನ್ ಸಿ" ಎಂಬ ಹೆಸರಿನ ಅಕ್ರಮ ಗೆಸ್ಟ್ ಹೌಸ್ ಕಟ್ಟಡ ಕಡಲಿನ ಅಂಚಿನಲ್ಲಿದ್ದು ಈಗಲೋ ಆಗಲೋ ಎನ್ನುವಂತಿತ್ತು. ಅದರ ಮಾಲಕ ಅಬ್ದುಲ್ಲ ಟಿ. ಎಂಬವರು ಕಟ್ಟಡದ ಬದಿಗೆ ಕಲ್ಲು, ಮರಳು ಮೂಟೆಗಳನ್ನ ಹಾಕಿ ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ ತೀರ ಪ್ರದೇಶದ ಮೂಲನಿವಾಸಿಗಳ ಮನೆಗಳೇ ಕಡಲಬ್ಬರಕ್ಕೆ ಕೊಚ್ಚಿ ಹೋಗುತ್ತಿದ್ದರಿಂದ ಜಿಲ್ಲಾಡಳಿತದಿಂದ ಗೆಸ್ಟ್ ಹೌಸ್ ರಕ್ಷಣೆಗೆ ಕಾಮಗಾರಿ ಕೈಗೊಳ್ಳಲು ಸ್ಥಳೀಯರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಇದರಿಂದ ರೋಸಿ ಹೋಗಿದ್ದ ಗೆಸ್ಟ್ ಹೌಸ್ ಮಾಲಕ ಕಡಲ್ಕೊರೆತ ವೀಕ್ಷಣೆಗೆ ಬಂದಿದ್ದ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರಲ್ಲಿಯೂ ಅಳಲು ತೋಡಿಕೊಂಡಿದ್ದರು. ಉಳ್ಳಾಲ ತಾಲೂಕು ಕಚೇರಿಗೆ ಕಂಪ್ಯೂಟರ್, ಪೀಠೋಪಕರಣಗಳನ್ನ ನೀಡಿದ್ದರೂ ತಮ್ಮ ಗೆಸ್ಟ್ ಹೌಸನ್ನ ರಕ್ಷಿಸಲು ತಹಶೀಲ್ದಾರ್ ಬಿಡುತ್ತಿಲ್ಲ ಎಂದು ದೂರು ಹೇಳಿದ್ದರು. ಆದರೆ ಮಾಲಕರ ಶತ ಪ್ರಯತ್ನದ ನಡುವೆಯೂ ಕಡಲಿನ ಅಬ್ಬರ ಹೆಚ್ಚುತ್ತಲೇ ಇದ್ದು ಈಗ ಗೆಸ್ಟ್ ಹೌಸ್ ಕಟ್ಟಡದ ಭಾಗಶಃ ನೀರುಪಾಲಾಗಿದೆ. ಸಮುದ್ರರಾಜನ ರಕ್ಕಸ ಅಲೆಗಳು ನುಗ್ಗಿ ಬರುತ್ತಿದ್ದು ಕೆಲವೇ ದಿನಗಳಲ್ಲಿ ಪೂರ್ತಿಯಾಗಿ ನುಂಗಿ ಹಾಕಲಿದೆ.
Guest house in Ullal finally due to soil erosion, administration negligence reason says owners.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm