ಬ್ರೇಕಿಂಗ್ ನ್ಯೂಸ್
08-08-22 09:42 pm Mangalore Correspondent ಕರಾವಳಿ
ಉಳ್ಳಾಲ, ಆ.8 : ಉಚ್ಚಿಲ, ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತ ಮತ್ತಷ್ಟು ತೀವ್ರಗೊಂಡಿದ್ದು ಕಡಲ ತೀರದಲ್ಲಿದ್ದ ಗೆಸ್ಟ್ ಹೌಸ್ ಕಟ್ಟಡವೊಂದು ಕಡೆಗೂ ಕಡಲು ಪಾಲಾಗಿದೆ.
ಈ ಬಾರಿಯ ಮಳೆಗಾಲ ಆರಂಭದಲ್ಲೇ ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿತ್ತು. ಬೀಚ್ ರಸ್ತೆಯನ್ನೇ ಕಡಲು ನುಂಗಿ ಹಾಕಿದ್ದು ತೀರದಲ್ಲಿರುವ ಬಹುತೇಕ ಮನೆಗಳು, ಗೆಸ್ಟ್ ಹೌಸ್ ಗಳು ಅಪಾದಂಚಿನಲ್ಲಿದ್ದವು. ಆಬಳಿಕ ಬಟ್ಟಪ್ಪಾಡಿ ಪ್ರದೇಶಕ್ಕೆ ಕಡಲ್ಕೊರೆತ ವೀಕ್ಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರ ದಂಡೇ ಆಗಮಿಸಿತ್ತು.

ಬಟ್ಟಂಪಾಡಿಯಲ್ಲಿ "ವಿಟಮಿನ್ ಸಿ" ಎಂಬ ಹೆಸರಿನ ಅಕ್ರಮ ಗೆಸ್ಟ್ ಹೌಸ್ ಕಟ್ಟಡ ಕಡಲಿನ ಅಂಚಿನಲ್ಲಿದ್ದು ಈಗಲೋ ಆಗಲೋ ಎನ್ನುವಂತಿತ್ತು. ಅದರ ಮಾಲಕ ಅಬ್ದುಲ್ಲ ಟಿ. ಎಂಬವರು ಕಟ್ಟಡದ ಬದಿಗೆ ಕಲ್ಲು, ಮರಳು ಮೂಟೆಗಳನ್ನ ಹಾಕಿ ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ ತೀರ ಪ್ರದೇಶದ ಮೂಲನಿವಾಸಿಗಳ ಮನೆಗಳೇ ಕಡಲಬ್ಬರಕ್ಕೆ ಕೊಚ್ಚಿ ಹೋಗುತ್ತಿದ್ದರಿಂದ ಜಿಲ್ಲಾಡಳಿತದಿಂದ ಗೆಸ್ಟ್ ಹೌಸ್ ರಕ್ಷಣೆಗೆ ಕಾಮಗಾರಿ ಕೈಗೊಳ್ಳಲು ಸ್ಥಳೀಯರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಇದರಿಂದ ರೋಸಿ ಹೋಗಿದ್ದ ಗೆಸ್ಟ್ ಹೌಸ್ ಮಾಲಕ ಕಡಲ್ಕೊರೆತ ವೀಕ್ಷಣೆಗೆ ಬಂದಿದ್ದ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರಲ್ಲಿಯೂ ಅಳಲು ತೋಡಿಕೊಂಡಿದ್ದರು. ಉಳ್ಳಾಲ ತಾಲೂಕು ಕಚೇರಿಗೆ ಕಂಪ್ಯೂಟರ್, ಪೀಠೋಪಕರಣಗಳನ್ನ ನೀಡಿದ್ದರೂ ತಮ್ಮ ಗೆಸ್ಟ್ ಹೌಸನ್ನ ರಕ್ಷಿಸಲು ತಹಶೀಲ್ದಾರ್ ಬಿಡುತ್ತಿಲ್ಲ ಎಂದು ದೂರು ಹೇಳಿದ್ದರು. ಆದರೆ ಮಾಲಕರ ಶತ ಪ್ರಯತ್ನದ ನಡುವೆಯೂ ಕಡಲಿನ ಅಬ್ಬರ ಹೆಚ್ಚುತ್ತಲೇ ಇದ್ದು ಈಗ ಗೆಸ್ಟ್ ಹೌಸ್ ಕಟ್ಟಡದ ಭಾಗಶಃ ನೀರುಪಾಲಾಗಿದೆ. ಸಮುದ್ರರಾಜನ ರಕ್ಕಸ ಅಲೆಗಳು ನುಗ್ಗಿ ಬರುತ್ತಿದ್ದು ಕೆಲವೇ ದಿನಗಳಲ್ಲಿ ಪೂರ್ತಿಯಾಗಿ ನುಂಗಿ ಹಾಕಲಿದೆ.
Guest house in Ullal finally due to soil erosion, administration negligence reason says owners.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm