ಬ್ರೇಕಿಂಗ್ ನ್ಯೂಸ್
04-10-20 11:26 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 4: ಗೋವುಗಳನ್ನು ಟೆಂಪೋದಲ್ಲಿ ಅಮಾನುಷವಾಗಿ ತುಂಬಿಸಿಕೊಂಡು ಸಾಗಿಸುತ್ತಿದ್ದ ವೇಳೆ ಗೋವುಗಳು ಒಂದೊಂದೇ ರಸ್ತೆಗೆ ಎಸೆಯಲ್ಪಟ್ಟು ಅವಾಂತರ ಸೃಷ್ಟಿಯಾದ ಘಟನೆ ನಗರದಲ್ಲಿ ನಡೆದಿದೆ.
ಸುರತ್ಕಲ್ ಕಡೆಯಿಂದ ನಸುಕಿನ ವೇಳೆ ಅಕ್ರಮವಾಗಿ ಗೋವುಗಳನ್ನು ಕುದ್ರೋಳಿ ಕಸಾಯಿಖಾನೆಯತ್ತ ತರಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಕೊಟ್ಟಾರ ಬಳಿ ತಡೆಯಲು ಯತ್ನಿಸಿದ್ದಾರೆ. ಆದರೆ, ಕಾರ್ಯಕರ್ತರನ್ನು ಲೆಕ್ಕಿಸದೆ ಟೆಂಪೋ ವೇಗವಾಗಿ ಧಾವಿಸಿದ್ದು ಈ ವೇಳೆ ಅಪಾಯಕಾರಿಯಾಗಿ ತುಂಬಿಸಿದ್ದ ಗೋವುಗಳು ಹಿಂಭಾಗದ ಬಾಗಿಲು ಓಪನ್ ಆಗಿ ರಸ್ತೆಗೆ ಎಸೆಯಲ್ಪಟ್ಟಿದೆ. ಕೊಟ್ಟಾರ, ಕುಂಟಿಕಾನ ಜಂಕ್ಷನ್, ಮಣ್ಣಗುಡ್ಡೆ ಬಳಿ ಒಂಬತ್ತು ಗೋವುಗಳು ಹೀಗೆ ರಸ್ತೆಗೆ ಬಿದ್ದು ನರಳಾಡಿವೆ. ಇಷ್ಟಾದರೂ, ಆರೋಪಿಗಳು ಟೆಂಪೋವನ್ನು ನಿಲ್ಲಿಸದೆ ಪರಾರಿಯಾಗಿದ್ದಾರೆ.
ಕೊನೆಗೆ, ಬಜರಂಗದಳ ಕಾರ್ಯಕರ್ತರು ಮಣ್ಣಗುಡ್ಡೆ ಬಳಿ ರಸ್ತೆಗೆ ಬಿದ್ದ ಗೋವುಗಳನ್ನು ರಸ್ತೆಯಲ್ಲೇ ಕಟ್ಟಿ ಪ್ರತಿಭಟನೆ ನಡೆಸಿದ್ದಾರೆ. ಕಾರ್ಯಕರ್ತರು ಬೆಳ್ಳಂಬೆಳಗ್ಗೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು ಸ್ಥಳಕ್ಕಾಗಮಿಸಿದ ಬರ್ಕೆ ಠಾಣೆ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.



ಟೆಂಪೋವನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಬೇಕು, ಅದರಲ್ಲಿದ್ದ 30ಕ್ಕೂ ಹೆಚ್ಚು ಗೋವುಗಳನ್ನು ವಶಕ್ಕೆ ಪಡೆಯಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಬಳಿಕ ಪೊಲೀಸರು ಟೆಂಪೋ ಮತ್ತು ಅದರಲ್ಲಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಅಲ್ಲಲ್ಲಿ ರಸ್ತೆಗೆ ಬಿದ್ದ ಒಂಬತ್ತು ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದಾರೆ.
ಹೀಗೆ ನೆಲಕ್ಕೆ ಬಿದ್ದ ಗೋವುಗಳಲ್ಲಿ ಹೆಚ್ಚಿನವು ಸಣ್ಣ ಪ್ರಾಯದ ಕರುಗಳು. ಕರುಗಳನ್ನು ಮಾಂಸ ಮಾಡಿ, ಮಟನ್ ಜೊತೆಗೆ ಬೆರೆಸುತ್ತಾರೆಂಬ ದೂರುಗಳಿವೆ. ಇದೇ ಕಾರಣಕ್ಕೆ ಗಂಡು ಕರುಗಳಿಗೆ ಭಾರೀ ಬೇಡಿಕೆ ಇದೆ. ನಿಯಮಿತವಾಗಿ ಮಟನ್ ಪೂರೈಕೆ ಆಗುವಲ್ಲಿ ಕರುಗಳ ಮಾಂಸವನ್ನು ಮಿಕ್ಸ್ ಮಾಡಲಾಗುತ್ತಿದೆ ಎನ್ನುವ ವಿಚಾರವನ್ನು ಅಲ್ಲಿನ ವ್ಯಾಪಾರಿಗಳೇ ಹೇಳುತ್ತಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಆಹಾರ ಇಲಾಖೆ ಅಧಿಕಾರಿಗಳು ತಪಾಸಣೆಗೆ ಬರದೇ ಇರುವುದು ದಂಧೆಕೋರರಿಗೆ ಭಯ ಇಲ್ಲದಾಗಿದೆ. ದಿನವೂ ನಸುಕಿನ ವೇಳೆ ಅಕ್ರಮ ಗೋಸಾಗಾಟ ನಡೆಯುತ್ತಿದ್ದರೂ, ಕಡಿವಾಣ ಇಲ್ಲದಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm