ಬ್ರೇಕಿಂಗ್ ನ್ಯೂಸ್
09-08-22 07:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಗೆ ಸಹಕಾರ, ಯೋಜನೆ ರೂಪಿಸಿದ ತಂಡದಲ್ಲಿ ಈತನೂ ಭಾಗಿಯಾಗಿದ್ದಾನೆ ಎಂದು ತನಿಖೆಯ ನೇತೃತ್ವ ವಹಿಸಿರುವ ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಮಾಹಿತಿ ನೀಡಿದ್ದಾರೆ.
ಅಬ್ದುಲ್ ಕಬೀರ್ ಸೆರೆಯೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಈ ಹಿಂದೆ ಆರು ಮಂದಿಯ ಬಂಧನ ಆಗಿತ್ತು. ಎರಡು ದಿನಗಳ ಹಿಂದೆ ನಾವೂರು ನಿವಾಸಿ ಆಬಿದ್(2) ಮತ್ತು ಬೆಳ್ಳಾರೆ ಠಾಣೆ ವ್ಯಾಪ್ತಿಯ ಗೌರಿಹೊಳೆ ನಿವಾಸಿ ನೌಫಾಲ್(28) ಬಂಧನ ಆಗಿತ್ತು. ಅದಕ್ಕೂ ಮುನ್ನ ಪಳ್ಳಿಮಜಲು ನಿವಾಸಿಗಳಾದ ಸದ್ದಾಮ್ ಮತ್ತು ಹ್ಯಾರಿಸ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಕೊಲೆಯಾದ ಎರಡೇ ದಿನದಲ್ಲಿ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಎಂಬವರನ್ನು ಬಂಧಿಸಲಾಗಿತ್ತು.


ಬಂಧಿತರೆಲ್ಲ ಕೊಲೆಗೆ ಸಂಚು, ಯೋಜನೆ ರೂಪಿಸಿದವರೆಂದು ಪೊಲೀಸರು ಗುರುತಿಸಿದ್ದಾರೆ. ನೇರ ಭಾಗಿಯಾದವರು ಇನ್ನೂ ಪೊಲೀಸರ ಬಲೆಗೆ ಬಿದ್ದಿಲ್ಲ. ಯಾರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಪೊಲೀಸರಿಗೆ ತಿಳಿದಿದ್ದು ಅವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆಬಿದ್ ಮತ್ತು ನೌಫಾಲ್, ಕೃತ್ಯ ಎಸಗಲು ಬೈಕ್ ಕೊಟ್ಟು ಸಹಕರಿಸಿದ್ದರು ಎನ್ನಲಾಗುತ್ತಿದೆ. ಕೊಲೆ ಕೃತ್ಯಕ್ಕೆ ಸುಳ್ಯದ ಎಸ್ಡಿಪಿಐ ಕಚೇರಿಯಲ್ಲಿ ಕುಳಿತು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ಆಬಿದ್ ಮತ್ತು ನೌಫಾಲನ್ನು ಕಚೇರಿಗೆ ಒಯ್ದು ಮಹಜರು ನಡೆಸಿದ್ದಾರೆ.
Sullia Praveen bellare murder Seventh accused arrested by Dk Police. The arrested has been identified as Abdul Kabeer.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm