ಬ್ರೇಕಿಂಗ್ ನ್ಯೂಸ್
09-08-22 10:27 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9 : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಎದುರಿಸುತ್ತೇವೆ ಎಂದಿದ್ದಾರೆ.

ಸಿದ್ದರಾಮಯ್ಯ ಉತ್ಸವದ ಬಳಿಕ ಕಾಂಗ್ರೆಸ್ನಲ್ಲಿ ಒಳ ಜಗಳ, ಬೀದಿ ಜಗಳ ಹೆಚ್ಚಾಗಿದೆ. ಕೋಳಿವಾಡರಂತಹ ಹಿರಿಯ ನಾಯಕರು ಸಿದ್ದರಾಮಯ್ಯರನ್ನು ಬಯ್ಯುವಂತಾಗಿದೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೋರಾಟ ಹೆಚ್ಚಾಗಿದೆ. ಅವರ ಒಳ ಜಗಳ, ಬೀದಿ ಜಗಳ, ಗೊಂದಲ, ಆಂತರಿಕ ಕಚ್ಚಾಟವನ್ನು ಮುಚ್ಚಿಡಲು ಕಾಂಗ್ರೆಸ್ ಈ ರೀತಿ ಟ್ವೀಟ್ ಮಾಡಿದೆ ಎಂದು ಹೇಳಿದ್ದಾರೆ.

ಗೊಂದಲ ಸೃಷ್ಟಿಸುವ ಕಾಂಗ್ರೆಸ್ ಆಟ ನಡೆಯುವುದಿಲ್ಲ. ಮೊದಲು ಅವರಲ್ಲಿರುವ ಗೊಂದಲವನ್ನು ಸರಿ ಮಾಡಿಕೊಳ್ಳಲಿ, ಕಾಂಗ್ರೆಸ್ ಭವಿಷ್ಯ ಏನೆಂಬುದು ಮುಂದಿನ ಚುನಾವಣೆಯಲ್ಲಿ ಗೊತ್ತಾಗಲಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಹಗರಣಗಳು ಬಯಲಿಗೆ ಬಂದಿದೆ. ಸೋನಿಯಾ, ರಾಹುಲ್ ಗಾಂಧೀಜಿ ಇಡಿ ತನಿಖೆ, ಡಿಕೆಶಿಯವರಿಗೆ ಜಾಮೀನು, ಮುಖ್ಯಮಂತ್ರಿ ಗೊಂದಲ, ದಲಿತ ಮುಖ್ಯಮಂತ್ರಿ ಚರ್ಚೆ ಇವೆಲ್ಲ ಗೊಂದಲಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಇಂತಹ ಟ್ವೀಟ್ ಮಾಡುತ್ತಿದೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ, ಬೊಮ್ಮಾಯಿ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.
CM Bommai to continue as CM no changes says state President Nalin Kumar Kateel in Mangalore.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm