ಬ್ರೇಕಿಂಗ್ ನ್ಯೂಸ್
12-08-22 02:46 pm Mangalore Correspondent ಕರಾವಳಿ
ಉಳ್ಳಾಲ, ಆ.12: ಬೆಳಗ್ಗಿನಿಂದ ಮನೆಯಿಂದ ನಾಪತ್ತೆಯಾಗಿದ್ದ ಉಳ್ಳಾಲದ ಶಿಕ್ಷಕಿಯೋರ್ವರ ಮೃತದೇಹ ಇಂದು ಮಧ್ಯಾಹ್ನ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಉಳ್ಳಾಲದ ಅಬ್ಬಕ್ಕ ಸರ್ಕಲ್ ನಲ್ಲಿ ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲಕಿ ಮತ್ತು ಶಿಕ್ಷಕಿಯೂ ಆಗಿರುವ ಹರಿಣಾಕ್ಷಿ ಬಸವರಾಜ್ (51)ಮೃತ ದುರ್ದೈವಿ. ಹರಿಣಾಕ್ಷಿ ಅವರ ಪತಿ ಬಸವರಾಜ್ ಅವರು ನ್ಯಾಯವಾದಿಯಾಗಿದ್ದು ಶಿವಮೊಗ್ಗದಲ್ಲಿದ್ದಾರೆ. ಹರಿಣಾಕ್ಷಿ ಅವರು ತನ್ನ ಇಬ್ಬರು ಪುತ್ರರೊಂದಿಗೆ ಅಬ್ಬಕ್ಕ ಸರ್ಕಲ್ ನಲ್ಲಿ ನೆಲೆಸಿದ್ದರು. ಮನೆಯ ಕಟ್ಟಡದಲ್ಲೇ ನರ್ಸರಿ, ಎಲ್ ಕೆಜಿ, ಯುಕೆಜಿ ಮಕ್ಕಳಿಗೆ ಇತರೇ ಸಿಬ್ಬಂದಿಗಳ ಜೊತೆ ಶಿಕ್ಷಣ, ಟ್ಯೂಷನ್ ನೀಡುತ್ತಿದ್ದರು. ಹರಿಣಾಕ್ಷಿ ಅವರ ಹಿರಿಯ ಪುತ್ರ ನಿತಿನ್ ರಾಜ್ ಇನ್ಫೋಸಿಸ್ ಸಂಸ್ಥೆಯಲ್ಲಿ ಇಂಜಿನಿಯರ್ ಆಗಿದ್ದು ಕಿರಿಯ ಪುತ್ರ ಅಮಿತ್ ರಾಜ್ ಎಲೋಶಿಯಸ್ ಕಾಲೇಜಲ್ಲಿ ಬಿಬಿಎ ದ್ವಿತೀಯ ವರ್ಷ ವ್ಯಾಸಂಗ ನಡೆಸುತ್ತಿದ್ದಾನೆ.



ಹರಿಣಾಕ್ಷಿ ಅವರ ಪುತ್ರರು ಇಂದು ಬೆಳಗ್ಗೆ ಎದ್ದಾಗ ತಾಯಿ ಮನೆಯಲ್ಲಿ ಇರಲಿಲ್ಲವಂತೆ. ಗಾಬರಿಗೊಂಡ ಮಕ್ಕಳು ತಾಯಿಗಾಗಿ ಹುಡುಕಾಟ ನಡೆಸಿದ್ದು ಕೊನೆಗೆ ಉಳ್ಳಾಲ ಪೊಲೀಸರಿಗೂ ವಿಷಯ ತಿಳಿಸಿದ್ದಾರೆ. ಮಧ್ಯಾಹ್ನದ ವೇಳೆ ಸಮುದಾಯ ಆರೋಗ್ಯ ಕೇಂದ್ರದ ಬಾವಿ ಬಳಿ ಹರಿಣಾಕ್ಷಿ ಅವರು ಧರಿಸುತ್ತಿದ್ದ ಚಪ್ಪಲಿ ದೊರಕಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯ ಈಜು ರಕ್ಷಕರು ಸೇರಿ ಬಾವಿಯೊಳಗಿದ್ದ ಮೃತದೇಹವನ್ನ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



ಮೃತ ಹರಿಣಾಕ್ಷಿ ಅವರು ಹಣಕಾಸಿನ ವಿಚಾರದಲ್ಲಿ ಸದೃಢರಾಗಿದ್ದು ಕೊರೊನಾ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳಿಗೆ ಜಾತಿ, ಮತ ನೋಡದೆ ಆಹಾರ ಸಾಮಾಗ್ರಿಗಳನ್ನ ನೀಡಿದ್ದರಂತೆ. ದಿನ ನಿತ್ಯವೂ ನಸುಕಿನ ವೇಳೆ ಅವರು ವಾಕಿಂಗ್ ನಡೆಸುತ್ತಿದ್ದು ನಿನ್ನೆ ಬೆಳಗ್ಗೆಯೂ ವಾಕಿಂಗ್ ಹೋಗಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ಸಂಜೆ ತಲೆನೋವು ಕಾರಣದಿಂದ ಸುಸ್ತಾಗಿದ್ದರೆಂದು ಪರಿಚಯಸ್ಥರು ತಿಳಿಸಿದ್ದಾರೆ.
Kinder garden school owners Body found in Health department well at Ullal in Mangalore, suicide suspected. The deceased woman has been identified as Harinakshi (51). The reason for her extreme step is still unknown. Her husband is said to be a lawyer by profession. She was the owner of a kinder garden school in Ullal.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm