ಬ್ರೇಕಿಂಗ್ ನ್ಯೂಸ್
04-10-20 05:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 4: ಗಾಂಜಾ ಮತ್ತಿನಲ್ಲಿ ಮನೆಗೆ ನುಗ್ಗಿದ ಯುವಕರ ತಂಡ ಮನೆಮಂದಿಗೆ ತಲವಾರು ತೋರಿಸಿ, ಬೆದರಿಸಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಪಚ್ಚನಾಡಿಯಲ್ಲಿ ನಡೆದಿದೆ.
ಪಚ್ಚನಾಡಿಯಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಫ್ರಾನ್ಸಿಸ್ ಎಂಬವರ ಮನೆಗೆ ನುಗ್ಗಿ ತಂಡವೊಂದು ದಾಂಧಲೆ ನಡೆಸಿದೆ. ನಿತಿನ್ ಮತ್ತು ಮಹೇಶ್ ಎಂಬವರ ತಂಡ ತಲವಾರು ಹಿಡಿದು ದಾಂಧಲೆ ನಡೆಸಿರುವ ಘಟನೆ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಸ್ಥಳೀಯರ ಮಾಹಿತಿ ಪ್ರಕಾರ, ನಿತಿನ್ ಎಂಬಾತ ಸ್ಥಳೀಯ ರೌಡಿಶೀಟರ್ ಆಗಿದ್ದು ಗಾಂಜಾ ಮತ್ತಿನಲ್ಲಿ ಪರಿಸರದಲ್ಲಿ ರೌಡಿಸಂ ನಡೆಸುತ್ತಿದ್ದಾನೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ರಾತ್ರಿ ವೇಳೆ ಮನೆಗೆ ನುಗ್ಗಿ ಹಲ್ಲೆ ನಡೆಸುತ್ತಾನೆ. ನಿನ್ನೆ ರಾತ್ರಿ ಫ್ರಾನ್ಸಿಸ್ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಆತನ ತಾಯಿಗೆ ತೀವ್ರ ಹಲ್ಲೆ ನಡೆಸಿದ್ದಾರೆ. ತಲವಾರು ಕಾಳಗದಲ್ಲಿ ಕಾರ್ತಿಕ್ ಎಂಬಾತನ ಕಾಲಿಗೆ ಕಡಿದಿದ್ದಾರೆ. ವಿಡಿಯೋದಲ್ಲಿ ತಲವಾರು ಹಿಡಿದು ತಳ್ಳಾಡುತ್ತಿರುವ ವಿಡಿಯೋ ಸೆರೆಯಾಗಿದೆ. ಪಚ್ಚನಾಡಿಯಲ್ಲಿ ಗಾಂಜಾ ವ್ಯಸನಿಗಳ ಗುಂಪು ಪ್ರತಿ ದಿನವೂ ರಾತ್ರಿ ವೇಳೆ ಸ್ಥಳೀಯರನ್ನು ತಲವಾರು ತೋರಿಸಿ ಬೆದರಿಸುತ್ತಿದೆ. ಪೊಲೀಸರ ನಿರ್ಲಕ್ಷ್ಯದಿಂದಲೇ ಈ ಭಾಗದಲ್ಲಿ ಗಾಂಜಾ ವ್ಯಸನಿಗಳು ಹೆಚ್ಚುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.
ಪಚ್ಚನಾಡಿ, ಬಂದಲೆ ಪರಿಸರ ಅತ್ತ ಕಾವೂರು ಠಾಣೆ ಮತ್ತು ಕಂಕನಾಡಿ ಗ್ರಾಮಾಂತರ ವಾಮಂಜೂರು ಠಾಣೆಯ ನಡುವಲ್ಲಿ ಬರುತ್ತದೆ. ಹೀಗಾಗಿ ಪೊಲೀಸರು ಇಲ್ಲಿಗೆ ರೌಂಡ್ಸ್ ಬರುವುದಿಲ್ಲ. ಇದರಿಂದಾಗಿ ಪುಂಡು ಪೋಕರಿಗಳ ಕಾಟ ಹೆಚ್ಚಾಗಿದೆ ಎನ್ನುತ್ತಿದ್ದಾರೆ ಸ್ಥಳೀಯರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm