ಬ್ರೇಕಿಂಗ್ ನ್ಯೂಸ್
12-08-22 07:30 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಶಾಲಾ ಮಕ್ಕಳು ಧರಿಸಿದ್ದ ರಾಖಿಯನ್ನು ತರಗತಿಯಲ್ಲಿ ಶಿಕ್ಷಕರು ತೆಗೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೋಷಕರು ಮತ್ತು ಹಿಂದು ಸಂಘಟನೆ ಕಾರ್ಯಕರ್ತರು ಶಾಲೆಗೆ ನುಗ್ಗಿ ಪ್ರತಿಭಟನೆ ನಡೆಸಿದ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.
ಸುರತ್ಕಲ್ ಬಳಿಯ ಕಾಟಿಪಳ್ಳದ ಇನ್ ಫ್ಯಾಂಟ್ರಿ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಘಟನೆ ನಡೆದಿದ್ದು, ಶಿಕ್ಷಕರ ಧೋರಣೆಯನ್ನು ಖಂಡಿಸಿ ವಿದ್ಯಾರ್ಥಿಗಳ ಪೋಷಕರು, ಹಿಂದು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಲಾ ನಿಯಮದ ಪ್ರಕಾರ ರಕ್ಷಾ ಬಂಧನ ಕಟ್ಟುವಂತಿಲ್ಲ ಎಂದು ಶಾಲೆಯ ಶಿಕ್ಷಕರು ಗುರುವಾರ ರಾಖಿ ಕಟ್ಟಿದ್ದ ಮಕ್ಕಳನ್ನು ಬಿಚ್ಚಿಸಿದ್ದಾರೆ ಎನ್ನಲಾಗಿದೆ.


ಇದರ ಬಗ್ಗೆ ಮಕ್ಕಳು ಪೋಷಕರಲ್ಲಿ ತಿಳಿಸಿದ್ದು, ಇಂದು ಬೆಳಗ್ಗೆ ಆಸುಪಾಸಿನ 50ಕ್ಕೂ ಹೆಚ್ಚು ಪೋಷಕರು ಶಾಲೆಯ ಮುಂದೆ ಸೇರಿದ್ದಾರೆ. ಇದೇ ವೇಳೆ, ವಿಷಯ ತಿಳಿದು ಸಂಘಟನೆಯ ಕಾರ್ಯಕರ್ತರು ಕೂಡ ಬಂದಿದ್ದು, ಹಿಂದು ಮಕ್ಕಳ ಭಾವನೆಗೆ ಧಕ್ಕೆ ತಂದಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಸುರತ್ಕಲ್ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದು ಪೋಷಕರನ್ನು ಸಮಾಧಾನಗೊಳಿಸಿದ್ದಾರೆ. ರಾಖಿಯನ್ನು ತೆಗೆಸಲು ಹೇಳಿರುವ ಶಿಕ್ಷಕರು ಬಂದು ಕ್ಷಮೆ ಕೇಳಬೇಕೆಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.


ಕೊನೆಗೆ, ಶಾಲಾಡಳಿತ ಮಂಡಳಿ ನೋಡಿಕೊಳ್ಳುವ ಫಾದರ್ ಸಂತೋಷ್ ಲೋಬೊ ಸ್ಥಳಕ್ಕೆ ಬಂದು ವಿವಾದವನ್ನು ಇಲ್ಲಿಗೇ ಮುಕ್ತಾಯಗೊಳಿಸುವ ಎಂದು ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದಾರೆ. ಅಲ್ಲದೆ, ರಾಖಿ ಕಟ್ಟುವುದಕ್ಕೇನು ನಮ್ಮ ಆಕ್ಷೇಪವಿಲ್ಲ. ಕೆಲವು ವಿದ್ಯಾರ್ಥಿಗಳು ಬಲವಂತದಿಂದ ರಾಖಿ ಕಟ್ಟಲು ಮುಂದಾಗಿದ್ದರು. ಇದರ ಬಗ್ಗೆ ಶಿಕ್ಷಕಿ ವಿರೋಧಿಸಿ ಗದರಿದ್ದರು ಅಷ್ಟೇ. ನಾವು ಎಲ್ಲರ ಭಾವನೆಯನ್ನೂ ಗೌರವಿಸುತ್ತೇವೆ ಎಂದು ಹೇಳಿ ಪೋಷಕರು ಮತ್ತು ಸೇರಿದ್ದ ಕಾರ್ಯಕರ್ತರಲ್ಲಿ ಆಗಿರುವ ಪ್ರಮಾದಕ್ಕೆ ಕ್ಷಮೆ ಕೇಳಿದ್ದಾರೆ.
Mangalore Parents hold protest at Infant Mary English school in Katipalla Surathkal after teachers remove rakhi from students.We conducted a meeting of all staff. Those who did the mistake have apologized & issue has been resolved: Father Santosh Lobo, Convenor of the school.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm