ಬ್ರೇಕಿಂಗ್ ನ್ಯೂಸ್
 
            
                        13-08-22 01:11 pm Mangalore Correspondent ಕರಾವಳಿ
 
            ಉಳ್ಳಾಲ, ಆ.13 : ಸಿಟಿ ಬಸ್ಸೊಂದು ಓವರ್ ಸ್ಪೀಡ್ ಚಲಿಸಿದ ಆರೋಪದಲ್ಲಿ ಟ್ರಾಫಿಕ್ ಎಎಸ್ಐ ರಾಬರ್ಟ್ ಲಸ್ರಾದೊ ದಂಡ ಹೇರಿದ್ದು ಅದನ್ನು ಪ್ರಶ್ನಿಸಿದ ಬಸ್ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ವಶಕ್ಕೆ ತೆಗೆದ ಘಟನೆ ನಡೆದಿದೆ. ಪೊಲೀಸರ ನಡೆಯಿಂದ ರೊಚ್ಚಿಗೆದ್ದ ಬಸ್ಸು ಚಾಲಕರು, ನಿರ್ವಾಹಕರು ತಲಪಾಡಿ ರೂಟ್ ನಲ್ಲಿ ಚಲಿಸುವ ಎಲ್ಲಾ ಬಸ್ಸುಗಳನ್ನ ನಿಲ್ಲಿಸಿ ಮುಷ್ಕರ ನಡೆಸಿದ್ದಾರೆ.
ಮಂಗಳೂರಿನಿಂದ ಮೇಲಿನ ತಲಪಾಡಿಗೆ ತೆರಳಿ ಹಿಂತಿರುಗುತ್ತಿದ್ದ 42 ರೂಟ್ ಸಂಖ್ಯೆಯ ಉಷಾ ಟ್ರಾವೆಲ್ಸ್ ಬಸ್ಸನ್ನು ತಲಪಾಡಿಯಲ್ಲಿ ಗಸ್ತಿನಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಎಎಸ್ಐ ರಾಬರ್ಟ್ ಲಸ್ರಾದೊ ತಡೆದು ಓವರ್ ಸ್ಪೀಡ್ ಕಾರಣಕ್ಕೆ 1000 ರೂಪಾಯಿ ದಂಡ ವಿಧಿಸಿದ್ದಾರೆ. ಬಸ್ ನಿರ್ವಾಹಕ ದಯಾನಂದ್ ಅವರು ನಾವು ವೇಗವಾಗಿ ಬಂದಿಲ್ಲ. ಕಲೆಕ್ಷನ್ ಕೂಡ ಈಗ ಕಮ್ಮಿ. ಅಷ್ಟು ದಂಡ ಕಟ್ಟಲು ಸಾಧ್ಯವಿಲ್ಲ ಎಂದು ಗೋಗರೆದಿದ್ದಾರೆ. ಈ ವೇಳೆ ಲಸ್ರಾದೊ ಅವರು ದಯಾನಂದ್ ಅವರಲ್ಲಿ ಬಸ್ಸಿನ ದಾಖಲೆ ಪತ್ರ ಕೇಳಿದ್ದಾರೆ. ದಾಖಲೆಗಳು ಆಫೀಸಲ್ಲಿ ಇದೆ ಎಂದು ಉತ್ತರಿಸಿದಾಗ, ನೀವು ಮತ್ತೆ ಗೀಸಲು ಇರುವುದಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ನಿರ್ವಾಹಕ ದಯಾನಂದ್ ಆರೋಪಿಸಿದ್ದಾರೆ.



ದಂಡ ಕಟ್ಟಲು ಬಸ್ ನಿರ್ವಾಹಕರು ಒಪ್ಪದಿದ್ದಾಗ ಚಾಲಕ ಅಭಿರಾಜ್ ಅವರನ್ನ ಲಸ್ರಾದೊ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಎಳೆದೊಯ್ದಿದ್ದು ಬಸ್ಸು ನೌಕರರ ಆಕ್ರೋಶಕ್ಕೆ ಕಾರಣವಾಗಿದೆ.ಮೇಲಿನ ತಲಪಾಡಿಯಲ್ಲಿ ಪೊಲೀಸರ ತಪಾಸಣೆಯ ಚೆಕ್ ಪೋಸ್ಟ್ ಇದೆ. ಹಾಗಿದ್ದರೂ ಬಸ್ಸನ್ನು ಹೇಗೆ ವೇಗವಾಗಿ ಚಲಾಯಿಸಲು ಸಾಧ್ಯ. ಬೇಕಾದರೆ ಸಿಸಿಟಿವಿ ದಾಖಲೆ ಪರಿಶೀಲಿಸಲಿ. ಸಿಟಿ ಬಸ್ ಸಿಬ್ಬಂದಿಗಳ ಮೇಲೆ ದಿನ ನಿತ್ಯವೂ ಟ್ರಾಫಿಕ್ ಪೊಲೀಸರು ಕೇಸು ಜಡಿದು ಅನ್ಯಾಯವೆಸಗುತ್ತಿದ್ದಾರೆಂದು ಬಸ್ಸು ನಿರ್ವಾಹಕ ಕಿಶೋರ್ ಆರೋಪಿಸಿದ್ದಾರೆ. ಬಸ್ಸು ಚಾಲಕ ಅಭಿರಾಜನ್ನ ಬಿಡುಗಡೆಗೊಳಿಸದೆ ಇದ್ದರೆ ಮುಷ್ಕರ ಮುಂದುವರೆಸೋದಾಗಿ ಬಸ್ ನೌಕರರು ಹೇಳಿದ್ದಾರೆ. ದಿಢೀರ್ ಸಿಟಿ ಬಸ್ ಮುಷ್ಕರದಿಂದ ಪ್ರಯಾಣಿಕರು ಕಂಗಾಲಾಗಿದ್ದು ಸರಕಾರಿ ಬಸ್ಸುಗಳನ್ನ ಕಾಯುವಂತಾಗಿದೆ.
ಕೊರಗಜ್ಜನ ಸ್ಟಿಕ್ಕರ್ ತೆಗೆಸಿದ್ದ ಲಸ್ರಾದೊ !
 \
\


ಟ್ರಾಫಿಕ್ ಎಎಸ್ಐ ಲಸ್ರಾದೊ ಅವರು ಈ ಹಿಂದೆಯೂ ತೊಕ್ಕೊಟ್ಟು ಫ್ಲೈ ಓವರ್ ಕೆಳಗಡೆ ಕಾರೊಂದನ್ನ ನಿಲ್ಲಿಸಿ ಅದರಲ್ಲಿದ್ದ ಕೊರಗಜ್ಜ ದೈವದ ಸ್ಟಿಕ್ಕರನ್ನು ತೆಗೆಸಲು ಚಾಲಕನಲ್ಲಿ ಹೇಳಿ ಹಿಂದೂ ಸಂಘಟನೆಗಳ ಆಕ್ರೋಶ, ಪ್ರತಿಭಟನೆಗೆ ಗುರಿಯಾಗಿದ್ದರು.
 
            
            
            Mangalore City Bus over speed, driver taken to custody, talapady route bus on strike. Words of war between Traffic ASI Lasrado and Bus drivers and conductors at Talapady.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm