ಬ್ರೇಕಿಂಗ್ ನ್ಯೂಸ್
14-08-22 04:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 14: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಅತ್ಯಂತ ವಿಶಿಷ್ಟವಾಗಿ ತ್ರಿವರ್ಣ ರಚಿಸಲಾಗಿದೆ. ದೇವಸ್ಥಾನದ ಮುಂದಿನ ಅಂಗಣದಲ್ಲಿ ಧವಸ ಧಾನ್ಯಗಳನ್ನಷ್ಟೇ ಬಳಸಿಕೊಂಡು ಆಕರ್ಷಕ ತ್ರಿವರ್ಣ ರಚಿಸಿದ್ದು ನೋಡುಗರ ಗಮನ ಸೆಳೆದಿದೆ.
ಗುರು ಬೆಳದಿಂಗಳು ಸಂಸ್ಥೆಯ ಆಶ್ರಯದಲ್ಲಿ ಮಂಗಳೂರಿನ ಕಲಾವಿದ ಮತ್ತು ಛಾಯಾಗ್ರಾಹಕ ಪುನಿಕ್ ಶೆಟ್ಟಿ ನೇತೃತ್ವದಲ್ಲಿ ಕ್ಷೇತ್ರದ ಸಿಬಂದಿ ಮತ್ತು ಗುರು ಬೆಳದಿಂಗಳು ಸಂಸ್ಥೆಯ ಸದಸ್ಯರು ಸೇರಿ 18 ಗಂಟೆಗಳ ಪರಿಶ್ರಮದಿಂದ ಆಕರ್ಷಕ ತ್ರಿವರ್ಣ ರಚಿಸಿದ್ದಾರೆ. ಯಾವುದೇ ಬಣ್ಣಗಳನ್ನು ಬಳಸದೆ ಕೇವಲ ಧಾನ್ಯ, ತರಕಾರಿ, ಹೂಗಳನ್ನಷ್ಟೇ ಬಳಸ್ಕೊಂಡು ತ್ರಿವರ್ಣದ ಆಕರ್ಷಣೆ ಮೂಡಿಸಿದ್ದು ವಿಶೇಷ.



ಒಟ್ಟು 900 ಕೇಜಿ ಧಾನ್ಯ, 100 ಕೇಜಿ ತರಕಾರಿ, 38 ಅಡಿ ವೃತ್ತ, 54 ಕಲಶ, 108 ಬಾಳೆಎಲೆ, 500 ವೀಳ್ಯದೆಲೆ, 100 ಕೇಜಿ ಬೆಳ್ತಿಗೆ ಅಕ್ಕಿಯನ್ನು ಬಳಸಲಾಗಿದೆ. 38 ಅಡಿ ವ್ಯಾಸದ ವೃತ್ತದಲ್ಲಿ ಹೆಸರು ಬೇಳೆಯನ್ನು ಹಸಿರು ಬಣ್ಣಕ್ಕೆ ಬಳಸಿದರೆ, ಬಿಳಿ ಬಣ್ಣವನ್ನು ಸೂಚಿಸಲು ಸಾಗುವನ್ನು ಬಳಸಲಾಗಿದೆ. ಕೇಸರಿ ಬಣ್ಣ ಸೂಚಿಸಲು ಕಡ್ಲೆ ಬೇಳೆಯನ್ನು ಉಪಯೋಗಿಸಲಾಗಿದೆ. ಅದರ ಸುತ್ತಲೂ ಬಾಳೆ ಎಲೆಯಲ್ಲಿ ಕಲಶಗಳನ್ನಿಟ್ಟು ವೀಳ್ಯದೆಲೆ ಮತ್ತು ಅಡಿಕೆ ಇರಿಸಲಾಗಿದೆ. ದೇವಸ್ಥಾನದ ಆವಣರಣ ಆಗಿರುವುದರಿಂದ ಧಾರ್ಮಿಕತೆಯ ಟಚ್ ಕೊಡಲಾಗಿದೆ.


ಕುದ್ರೋಳಿ ದೇವಸ್ಥಾನದ ರೂವಾರಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ದೀಪ ಬೆಳಗಿಸಿ, ಆಕರ್ಷಕ ತ್ರಿವರ್ಣವನ್ನು ಲೋಕಾರ್ಪಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಗುರು ಬೆಳದಿಂಗಳು ಸಂಸ್ಥೆಯ ಅಧ್ಯಕ್ಷ ಪದ್ಮರಾಜ್ ಆರ್., ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಕ್ಷೇತ್ರದ ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಮೊಂತೇರೊ, ಕಾರ್ಪೊರೇಟರ್ ಅನಿಲ್, ಲೀಲಾಕ್ಷ ಕರ್ಕೇರ, ಚಿತ್ತರಂಜನ್ ಗರೋಡಿ ಮತ್ತಿತರರಿದ್ದರು.
To mark the Amrut Mahotsav (75th anniversary of the country's Independence), the Kudroli Shree Gokarnanatheshwara Temple Committee has drawn a 38 feet tricolor national flag with food grains (Dhanya) and vegetables on the premises of Kudroli Gokarnanatheshwara Temple here on Sunday, August 14.Former minister B Janardhan Poojary inaugurated the rangoli. He also greeted the public for the 75th anniversary of the country's Independence on the occasion.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm