ಬ್ರೇಕಿಂಗ್ ನ್ಯೂಸ್
15-08-22 04:47 pm Mangalore Correspondent ಕರಾವಳಿ
ಉಳ್ಳಾಲ, ಆ.15 : ಉಳ್ಳಾಲದ ಹೆಬ್ಬಾಗಿಲಾದ ತೊಕ್ಕೊಟ್ಟು ಓವರ್ ಬ್ರಿಡ್ಜಲ್ಲಿ ಸ್ಥಾಪನೆಗೊಂಡ 110 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಮೊದಲ ಬಾರಿಗೆ ಗಜಗಾತ್ರದ ರಾಷ್ಟ್ರ ಧ್ವಜ ಬಾನೆತ್ತರಕ್ಕೆ ಹಾರಿದೆ.
ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ಉಳ್ಳಾಲವು ತಾಲೂಕಾಗಿ ಬೇರ್ಪಟ್ಟ ನಂತರ ನೂತನ 110 ಅಡಿ ಧ್ವಜ ಸ್ಥಂಭದಲ್ಲಿ ಮೊದಲ ಧ್ವಜಾರೋಹಣಗೈದ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಭಾಜನರಾದರು. ಸ್ವಿಚ್ ಅದುಮುವ ಮುಖೇನ ಅವರು ಧ್ವಜಾರೋಹಣಗೈದರು.ಶಾಸಕ ಯು.ಟಿ.ಖಾದರ್ ಮಾತನಾಡಿ ಉಳ್ಳಾಲದ ಜನರ ದೇಶಪ್ರೇಮ, ಸ್ವಾಭಿಮಾನದ ಸಂಕೇತವಾಗಿ ಶಾಶ್ವತವಾಗಿ ಈ ರಾಷ್ಟ್ರಧ್ವಜ 24 ಗಂಟೆ ಹಾರಾಡಲಿದೆ. 75ರ ಸ್ವಾತಂತ್ರ್ಯ ಸಂಭ್ರಮದಲ್ಲಿ ನಮಗೆ ಪಾಲ್ಗೊಳ್ಳಲು ಅವಕಾಶ ದೊರಕಿದ್ದು ನಮ್ಮೆಲ್ಲರ ಭಾಗ್ಯ. ಮುಂದಿನ ದಿವಸಗಳಲ್ಲಿ ನಾವು ದ್ವೇಷ ಎಂಬ ಪದವನ್ನ ಹೃದಯದಿಂದಲೇ ಕಿತ್ತೆಸೆಯುವ ಕಾರ್ಯ ನಡೆಸಿ ಎಲ್ಲರೂ ಜತೆಗೂಡಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಬೇಕೆಂದು ಕರೆ ನೀಡಿದರು.








ಧ್ವಜಾರೋಹಣಕ್ಕೂ ಮುನ್ನ ಉಳ್ಳಾಲ ರಾಣಿ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟಿನ ವರೆಗೆ ತಿರಂಗಾ ಯಾತ್ರೆ ನಡೆಯಿತು. ಓವರ್ ಬ್ರಿಡ್ಜಲ್ಲಿ ನಡೆದ ಐತಿಹಾಸಿಕ ಧ್ವಜಾರೋಹಣಕ್ಕೆ ಸಾವಿರಾರು ದೇಶಭಕ್ತ ಜನರು ಸಾಕ್ಷಿಯಾದರು. ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ, ಗೌರವ ಸಲ್ಲಿಸಿದ ಬಳಿಕ ಓವರ್ ಬ್ರಿಡ್ಜ್ ವರೆಗೆ ಮೆರವಣಿಗೆಯಲ್ಲಿ ಬಂದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಬಂದು ತ್ರಿವರ್ಣ ತಿರಂಗಾ ಏರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Mangalore 110 Feet tall national flag attracts a large gathering at Ullal on Independence day.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm