ಬ್ರೇಕಿಂಗ್ ನ್ಯೂಸ್
15-08-22 04:47 pm Mangalore Correspondent ಕರಾವಳಿ
ಉಳ್ಳಾಲ, ಆ.15 : ಉಳ್ಳಾಲದ ಹೆಬ್ಬಾಗಿಲಾದ ತೊಕ್ಕೊಟ್ಟು ಓವರ್ ಬ್ರಿಡ್ಜಲ್ಲಿ ಸ್ಥಾಪನೆಗೊಂಡ 110 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಮೊದಲ ಬಾರಿಗೆ ಗಜಗಾತ್ರದ ರಾಷ್ಟ್ರ ಧ್ವಜ ಬಾನೆತ್ತರಕ್ಕೆ ಹಾರಿದೆ.
ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ಉಳ್ಳಾಲವು ತಾಲೂಕಾಗಿ ಬೇರ್ಪಟ್ಟ ನಂತರ ನೂತನ 110 ಅಡಿ ಧ್ವಜ ಸ್ಥಂಭದಲ್ಲಿ ಮೊದಲ ಧ್ವಜಾರೋಹಣಗೈದ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಭಾಜನರಾದರು. ಸ್ವಿಚ್ ಅದುಮುವ ಮುಖೇನ ಅವರು ಧ್ವಜಾರೋಹಣಗೈದರು.ಶಾಸಕ ಯು.ಟಿ.ಖಾದರ್ ಮಾತನಾಡಿ ಉಳ್ಳಾಲದ ಜನರ ದೇಶಪ್ರೇಮ, ಸ್ವಾಭಿಮಾನದ ಸಂಕೇತವಾಗಿ ಶಾಶ್ವತವಾಗಿ ಈ ರಾಷ್ಟ್ರಧ್ವಜ 24 ಗಂಟೆ ಹಾರಾಡಲಿದೆ. 75ರ ಸ್ವಾತಂತ್ರ್ಯ ಸಂಭ್ರಮದಲ್ಲಿ ನಮಗೆ ಪಾಲ್ಗೊಳ್ಳಲು ಅವಕಾಶ ದೊರಕಿದ್ದು ನಮ್ಮೆಲ್ಲರ ಭಾಗ್ಯ. ಮುಂದಿನ ದಿವಸಗಳಲ್ಲಿ ನಾವು ದ್ವೇಷ ಎಂಬ ಪದವನ್ನ ಹೃದಯದಿಂದಲೇ ಕಿತ್ತೆಸೆಯುವ ಕಾರ್ಯ ನಡೆಸಿ ಎಲ್ಲರೂ ಜತೆಗೂಡಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಬೇಕೆಂದು ಕರೆ ನೀಡಿದರು.








ಧ್ವಜಾರೋಹಣಕ್ಕೂ ಮುನ್ನ ಉಳ್ಳಾಲ ರಾಣಿ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟಿನ ವರೆಗೆ ತಿರಂಗಾ ಯಾತ್ರೆ ನಡೆಯಿತು. ಓವರ್ ಬ್ರಿಡ್ಜಲ್ಲಿ ನಡೆದ ಐತಿಹಾಸಿಕ ಧ್ವಜಾರೋಹಣಕ್ಕೆ ಸಾವಿರಾರು ದೇಶಭಕ್ತ ಜನರು ಸಾಕ್ಷಿಯಾದರು. ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ, ಗೌರವ ಸಲ್ಲಿಸಿದ ಬಳಿಕ ಓವರ್ ಬ್ರಿಡ್ಜ್ ವರೆಗೆ ಮೆರವಣಿಗೆಯಲ್ಲಿ ಬಂದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಬಂದು ತ್ರಿವರ್ಣ ತಿರಂಗಾ ಏರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Mangalore 110 Feet tall national flag attracts a large gathering at Ullal on Independence day.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm