ಬ್ರೇಕಿಂಗ್ ನ್ಯೂಸ್
15-08-22 06:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 15 : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇಶಭಕ್ತಿಯನ್ನು ಸಾರುವ ನೃತ್ಯ ಪ್ರದರ್ಶನದಲ್ಲಿ ಸ್ವಾತಂತ್ರ್ಯ ಯೋಧರ ಚಿತ್ರ ಪ್ರದರ್ಶಿಸಲಾಗಿತ್ತು. ಗಾಂಧೀಜಿ, ಸುಭಾಶ್ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಹಲವು ಖ್ಯಾತನಾಮರ ಫೋಟೋಗಳಿದ್ದವು. ಭಾರತದ ಭೂಪಟದ ಮೇಲೆ ಇನ್ನಿತರ ಸ್ವಾತಂತ್ರ್ಯ ವೀರರ ಚಿತ್ರಗಳಿದ್ದವು. ಇದರ ನಡುವೆ, ವೀರ ಸಾವರ್ಕರ್ ಚಿತ್ರ ಇತ್ತೆಂದು ಎಸ್ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಕಾರ್ಯಕ್ರಮವನ್ನೇ ಸ್ಥಗಿತಗೊಳಿಸಿದ ಘಟನೆ ಗುರುಪುರದಲ್ಲಿ ನಡೆದಿದೆ.
ಗುರುಪುರ ಪಂಚಾಯತ್ ಆವರಣಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುಪುರದ ಬೆಥಣಿ ಸ್ಕೂಲ್ ನ ಮಕ್ಕಳು ಸ್ವಾತಂತ್ರ್ಯ ಯೋಧರ ಕುರಿತು ನೃತ್ಯ ರೂಪಕವನ್ನು ವೇದಿಕೆಯಲ್ಲಿ ಪ್ರದರ್ಶಿಸಿದ್ದರು. ನೃತ್ಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಗುರುಪುರ ಪಂಚಾಯತಿನಲ್ಲಿ ಆಡಳಿತ ನಡೆಸುತ್ತಿರುವ ಎಸ್ಡಿಪಿಐ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು ಕಾರ್ಯಕ್ರಮವನ್ನೇ ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, SDPI-ಕಾಂಗ್ರೆಸ್ ಸದಸ್ಯರು ಕಾರ್ಯಕ್ರಮ ನಡೆಸಿದ ಮಕ್ಕಳ ಬೆಥಣಿ ಸ್ಕೂಲ್ ಮುಖ್ಯ ಗುರುಗಳಿಂದ ಕ್ಷಮೆಯಾಚನೆಗೂ ಪಟ್ಟು ಹಿಡಿದ್ದಾರೆ. ಕಾಂಗ್ರೆಸ್ ಮತ್ತು ಎಸ್ಡಿಪಿಐ ನಾಯಕರ ಆಕ್ರೋಶಕ್ಕೆ ಮಣಿದು ಶಾಲಾ ಶಿಕ್ಷಕರು ಕ್ಷಮೆಯನ್ನೂ ಕೇಳಿದ್ದಾರೆ.





ಆಬಳಿಕ ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕಾಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೃತ್ಯ ರೂಪಕದಲ್ಲಿ ಕೇವಲ ಫೋಟೊ ಹಿಡಿದ ಮಾತ್ರಕ್ಕೆ ಈ ರೀತಿ ವರ್ತಿಸಿರುವುದು ಅಕ್ಷಮ್ಯ. ಗುರುಪುರ ಪಂಚಾಯತ್ ಆಡಳಿತಾರೂಢ ಎಸ್ಡಿಪಿಐ ಮತ್ತು ಕಾಂಗ್ರೆಸ್ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪೊಲೀಸರನ್ನು ಕರೆಸಿದ್ದಾರೆ. ಕಾರ್ಯಕ್ರಮ ನಿಲ್ಲಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಮಾಡಿದ್ದಾರೆ.
Mangalore Savarkars photo displayed while dancing during independence day at Gurupura sparks controversy during the cultural event held by School. SDPI members who were angry on this complained the Police officials and Gurupura panchayat members who came to the spot slammed the organizers for doing such.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm