ಬ್ರೇಕಿಂಗ್ ನ್ಯೂಸ್
16-08-22 08:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 16: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶಭಕ್ತಿ ಸಾರುವ ನೃತ್ಯ ಪ್ರದರ್ಶನದ ವೇಳೆ ಎಸ್ಡಿಪಿಐ ಕಾರ್ಯಕರ್ತರು ಅಡ್ಡಿಪಡಿಸಿ ಕಾರ್ಯಕ್ರಮ ನಿಲ್ಲಿಸಿದ ಘಟನೆ ಬಗ್ಗೆ ಬಜ್ಪೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗುರುಪುರ ಗ್ರಾಮ ಪಂಚಾಯತ್ ಪಿಡಿಓ ಅಬುಬಕ್ಕರ್ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ಕಾರ್ಯಕ್ರಮದ ಸಂದರ್ಭ ಪ್ರೇಕ್ಷಕರಾಗಿ ಆಗಮಿಸಿದ್ದ ರಿಯಾಜ್, ಮನ್ಸೂರ್, ಅಶ್ರಫ್, ಶಾಹಿಕ್ ಸೇರಿ ಇತರರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾಗಿ ದೂರು ನೀಡಲಾಗಿದ್ದು ಅವರ ವಿರುದ್ಧ ಐಪಿಸಿ ಸೆಕ್ಷನ್ 340, 353 ಮತ್ತು 149 ಅಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗುರುಪುರ ಪಂಚಾಯತ್ ವತಿಯಿಂದ ಮುಳೂರಿನಲ್ಲಿ ಕಚೇರಿ ಎದುರುಗಡೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಧ್ಯಾಹ್ನ 12.30ರ ಸುಮಾರಿಗೆ ಬೆಥನಿ ಶಾಲಾ ಮಕ್ಕಳು ದೇಶಭಕ್ತಿ ಸಾರುವ ಹಿಂದಿ ಗೀತೆಯನ್ನು ನೃತ್ಯ ರೂಪಕದ ಮೂಲಕ ಪ್ರಸ್ತುತ ಪಡಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಭಾರತದ ಭೂಪಟದಲ್ಲಿ ಹಲವು ಸ್ವಾತಂತ್ರ್ಯ ಸೇನಾನಿಗಳ ಫೋಟೋ ಪ್ರದರ್ಶನ ಮಾಡಲಾಗಿತ್ತು.




ಇದರಲ್ಲಿ ಸಾವರ್ಕರ್ ಫೋಟೋ ಯಾಕೆ ಪ್ರದರ್ಶನ ಮಾಡಿದ್ದೀರೆಂದು ಅಲ್ಲಿ ಸೇರಿದ್ದ ಎಸ್ಡಿಪಿಐ ಕಾರ್ಯಕರ್ತರು ಪ್ರಶ್ನೆ ಮಾಡಿದ್ದು, ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಶಾಲಾ ಶಿಕ್ಷಕರು ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ. ಕಾರ್ಯಕ್ರಮಕ್ಕೆ ತಮ್ಮಿಂದಾಗಿ ಅಡ್ಡಿಯಾಗುವುದು ಬೇಡವೆಂದು ಶಿಕ್ಷಕರು ಕ್ಷಮೆಯನ್ನೂ ಕೇಳಿದ್ದಾರೆ. ಆದರೆ, ಇದರಿಂದಾಗಿ ಸರಕಾರಿ ಕಾರ್ಯಕ್ರಮದಲ್ಲಿ ಸಾರ್ವಜನಿಕರ ನಡುವೆ ಭೇದ ಉಂಟು ಮಾಡಿದಂತಾಗಿದ್ದು, ಸ್ವಾತಂತ್ರ್ಯ ಯೋಧರನ್ನು ಅವಮಾನಿಸಲಾಗಿತ್ತು. ಘಟನೆ ಬಗ್ಗೆ ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ಕೇಳಿಬಂದಿದ್ದರಿಂದ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಪೊಲೀಸರಿಗೆ ಮತ್ತು ಪಂಚಾಯತ್ ಸಿಬಂದಿಗೆ ಆಗ್ರಹ ಮಾಡಿದ್ದರು. ಇದರ ಹಿನ್ನೆಲೆಯಲ್ಲಿ ಪಂಚಾಯತ್ ಪಿಡಿಓ ಪೊಲೀಸರಿಗೆ ದೂರು ನೀಡಿದ್ದಾರೆ.
Savarkar banner row in Surathkal Mangalore, case filed against SDPI members at Bajpe station. During the independence day celebration students displayed Savarkar photo after which SDPI members created controversy.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm