ಬ್ರೇಕಿಂಗ್ ನ್ಯೂಸ್
16-08-22 08:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 16: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶಭಕ್ತಿ ಸಾರುವ ನೃತ್ಯ ಪ್ರದರ್ಶನದ ವೇಳೆ ಎಸ್ಡಿಪಿಐ ಕಾರ್ಯಕರ್ತರು ಅಡ್ಡಿಪಡಿಸಿ ಕಾರ್ಯಕ್ರಮ ನಿಲ್ಲಿಸಿದ ಘಟನೆ ಬಗ್ಗೆ ಬಜ್ಪೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗುರುಪುರ ಗ್ರಾಮ ಪಂಚಾಯತ್ ಪಿಡಿಓ ಅಬುಬಕ್ಕರ್ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ಕಾರ್ಯಕ್ರಮದ ಸಂದರ್ಭ ಪ್ರೇಕ್ಷಕರಾಗಿ ಆಗಮಿಸಿದ್ದ ರಿಯಾಜ್, ಮನ್ಸೂರ್, ಅಶ್ರಫ್, ಶಾಹಿಕ್ ಸೇರಿ ಇತರರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾಗಿ ದೂರು ನೀಡಲಾಗಿದ್ದು ಅವರ ವಿರುದ್ಧ ಐಪಿಸಿ ಸೆಕ್ಷನ್ 340, 353 ಮತ್ತು 149 ಅಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗುರುಪುರ ಪಂಚಾಯತ್ ವತಿಯಿಂದ ಮುಳೂರಿನಲ್ಲಿ ಕಚೇರಿ ಎದುರುಗಡೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಧ್ಯಾಹ್ನ 12.30ರ ಸುಮಾರಿಗೆ ಬೆಥನಿ ಶಾಲಾ ಮಕ್ಕಳು ದೇಶಭಕ್ತಿ ಸಾರುವ ಹಿಂದಿ ಗೀತೆಯನ್ನು ನೃತ್ಯ ರೂಪಕದ ಮೂಲಕ ಪ್ರಸ್ತುತ ಪಡಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಭಾರತದ ಭೂಪಟದಲ್ಲಿ ಹಲವು ಸ್ವಾತಂತ್ರ್ಯ ಸೇನಾನಿಗಳ ಫೋಟೋ ಪ್ರದರ್ಶನ ಮಾಡಲಾಗಿತ್ತು.




ಇದರಲ್ಲಿ ಸಾವರ್ಕರ್ ಫೋಟೋ ಯಾಕೆ ಪ್ರದರ್ಶನ ಮಾಡಿದ್ದೀರೆಂದು ಅಲ್ಲಿ ಸೇರಿದ್ದ ಎಸ್ಡಿಪಿಐ ಕಾರ್ಯಕರ್ತರು ಪ್ರಶ್ನೆ ಮಾಡಿದ್ದು, ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಶಾಲಾ ಶಿಕ್ಷಕರು ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ. ಕಾರ್ಯಕ್ರಮಕ್ಕೆ ತಮ್ಮಿಂದಾಗಿ ಅಡ್ಡಿಯಾಗುವುದು ಬೇಡವೆಂದು ಶಿಕ್ಷಕರು ಕ್ಷಮೆಯನ್ನೂ ಕೇಳಿದ್ದಾರೆ. ಆದರೆ, ಇದರಿಂದಾಗಿ ಸರಕಾರಿ ಕಾರ್ಯಕ್ರಮದಲ್ಲಿ ಸಾರ್ವಜನಿಕರ ನಡುವೆ ಭೇದ ಉಂಟು ಮಾಡಿದಂತಾಗಿದ್ದು, ಸ್ವಾತಂತ್ರ್ಯ ಯೋಧರನ್ನು ಅವಮಾನಿಸಲಾಗಿತ್ತು. ಘಟನೆ ಬಗ್ಗೆ ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ಕೇಳಿಬಂದಿದ್ದರಿಂದ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಪೊಲೀಸರಿಗೆ ಮತ್ತು ಪಂಚಾಯತ್ ಸಿಬಂದಿಗೆ ಆಗ್ರಹ ಮಾಡಿದ್ದರು. ಇದರ ಹಿನ್ನೆಲೆಯಲ್ಲಿ ಪಂಚಾಯತ್ ಪಿಡಿಓ ಪೊಲೀಸರಿಗೆ ದೂರು ನೀಡಿದ್ದಾರೆ.
Savarkar banner row in Surathkal Mangalore, case filed against SDPI members at Bajpe station. During the independence day celebration students displayed Savarkar photo after which SDPI members created controversy.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am