ಬ್ರೇಕಿಂಗ್ ನ್ಯೂಸ್
05-10-20 12:38 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 05 : ಈ ಬಾರಿ ಕೃಷ್ಣಾಷ್ಟಮಿ, ಗಣೇಶೋತ್ಸವಕ್ಕೆ ಕೊರೊನಾ ನಿರ್ಬಂಧ ನೆಪದಲ್ಲಿ ಆಚರಣೆಗೆ ಅವಕಾಶ ನೀಡಿರದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಸರಾ ಉತ್ಸವಕ್ಕೆ ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ದೇವಸ್ಥಾನಗಳಲ್ಲಿ ಆಚರಿಸಲು ಅವಕಾಶ ನೀಡಿದೆ.
ದೇವಸ್ಥಾನಗಳಲ್ಲಿ ದಸರಾ ಹಬ್ಬದ ನಿಮಿತ್ತ ಶಾರದಾ ವಿಗ್ರಹ ಸ್ಥಾಪನೆ ಮಾಡಿದರೂ ಹೆಚ್ಚಿನ ಜನ ಸೇರಲು ಅವಕಾಶ ಇಲ್ಲ. ಯಾವುದೇ ತರಹದ ಸಭೆ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇರಲ್ಲ. ಅಲ್ಲದೆ, ಹುಲಿವೇಷ ತಂಡಕ್ಕೂ ಅವಕಾಶ ನೀಡದಿರಲು ಜಿಲ್ಲಾ ಧಾರ್ಮಿಕ ಪರಿಷತ್ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ದಸರಾ ಹಬ್ಬ ನೆಪದಲ್ಲಿ ಜನಸಂದಣಿ ಸೇರುವಂತಿಲ್ಲ. ಅಲ್ಲದೆ ದೇವಸ್ಥಾನಗಳಲ್ಲಿ ಭಕ್ತರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕಾೃನಿಂಗ್, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ನಿಯಮಗಳನ್ನು ಜಾರಿಗೆ ತರಲು ಸ್ವಯಂಸೇವಕರನ್ನು ಬಳಸಿಕೊಳ್ಳಬೇಕು. ದೇವಸ್ಥಾನದ ಒಳಗೆ ಸಾಮಾಜಿಕ ಅಂತರ ಕಾಪಾಡಲು ಕುರ್ಚಿಗಳನ್ನು ಇರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕ್ರಮ ನೇರಪ್ರಸಾರ ಮಾಡಿ, ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು. ದೊಡ್ಡ ಗಾತ್ರದ ಶಾಮಿಯಾನ, ಚಪ್ಪರ ಹಾಕಲು ಅವಕಾಶ ನೀಡದಂತೆ ಎಲ್ಲಾ ದೇವಸ್ಥಾನಗಳಿಗೆ ಸೂಚಿಸುವ ನಿಟ್ಟಿನಲ್ಲಿ ನಿರ್ಧಾರಕ್ಕೆ ಬರಲಾಗಿದೆ. ಇಷ್ಟೇ ಅಲ್ಲದೆ ಹಬ್ಬದಲ್ಲಿ ಅಂಗಡಿ ವ್ಯಾಪಾರಕ್ಕೆ ಕೂಡ ಅವಕಾಶ ನೀಡಲಾಗಿಲ್ಲ.

ಇದೇ ವೇಳೆ ಮುಂಬರುವ ದೀಪಾವಳಿ ಹಬ್ಬವನ್ನೂ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೀಪಾವಳಿಗೆ ಸುಡುಮದ್ದು/ಪಟಾಕಿ ಶೇಖರಣೆ, ಮಾರಾಟ ಹಾಗೂ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆಗಿರುವ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಈ ಸಭೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕೆ.ಸೂರ್ಯ ಕಶೆಕೋಡಿ, ಸೂರ್ಯನಾರಾಯಣ ಭಟ್, ಹಾಗೂ ವಿವಿಧ ದೇವಸ್ಥಾನಗಳ ಆಡಳಿತ ಮುಖ್ಯಸ್ಥರು ಉಪಸ್ಥಿತರಿದ್ದರು.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm