ಬ್ರೇಕಿಂಗ್ ನ್ಯೂಸ್
05-10-20 01:30 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಸೇರಿದ ಕಾರ್ಯಕರ್ತರು ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂರಾರು ಕಾರ್ಯಕರ್ತರು ದಿಢೀರ್ ಆಗಿ ರಸ್ತೆ ತಡೆ ನಡೆಸಿದ್ದಲ್ಲದೆ, ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಾರೆ.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಅನುಮತಿ ಪಡೆಯದೆ ರಸ್ತೆ ತಡೆ ನಡೆಸಿದ್ದಕ್ಕಾಗಿ ಪೊಲೀಸರು ಮಿಥುನ್ ರೈ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು. ಈ ವೇಳೆ, ಕೆಲವು ಕಾರ್ಯಕರ್ತರು ರಸ್ತೆಯಲ್ಲಿ ಟೈಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾ ಫ್ರೀ ಪ್ರತಿಭಟನೆ !
ಪ್ರತಿಭಟನೆ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರೂ ಯಾರೊಬ್ಬರೂ ಮುಖಕ್ಕೆ ಮಾಸ್ಕ್ ಹಾಕಿರಲಿಲ್ಲ. ಸರಕಾರದ ನಿಯಮ ಪ್ರಕಾರ, ಮಾಸ್ಕ್ ಹಾಕದೆ ಜನ ಸೇರುವಂತಿಲ್ಲ. ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿರುವ ಕಾರಣ ಮಾಸ್ಕ್ ಧರಿಸುವುದನ್ನು ಮಹಾನಗರ ಪಾಲಿಕೆ ಕಡ್ಡಾಯಗೊಳಿಸಿದೆ. ಅಲ್ಲದೆ, ಮಾಸ್ಕ್ ಹಾಕದೆ ತಿರುಗಾಡುವ ಸಾರ್ವಜನಿಕರ ವಿರುದ್ಧ ಮಹಾನಗರ ಪಾಲಿಕೆ ದಂಡವನ್ನೂ ವಿಧಿಸುತ್ತಿದೆ. ಪ್ರತಿಭಟನಕಾರರು ಮಾತ್ರ ಮಾಸ್ಕನ್ನೂ ಹಾಕಿಲ್ಲ, ಅಂತರವನ್ನೂ ಕಾಯ್ದುಕೊಂಡಿರಲಿಲ್ಲ.
Video :
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm