ಬ್ರೇಕಿಂಗ್ ನ್ಯೂಸ್
18-08-22 10:18 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಬೆಂಗಳೂರು, ಶಿವಮೊಗ್ಗ, ಮಂಗಳೂರು ಸೇರಿ ರಾಜ್ಯದ ಹಲವೆಡೆ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಫ್ಲೆಕ್ಸ್ ಹಾಕಿದರೆ, ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಅದನ್ನು ತೆರವು ಮಾಡಿ ಕಿಚ್ಚು ಹೊತ್ತಿಕೊಳ್ಳುವಂತೆ ಮಾಡಿದ್ದಾರೆ. ಆದರೆ ಕೋಮು ಸೂಕ್ಷ್ಮ ಪ್ರದೇಶ ಉಳ್ಳಾಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಗುರುತಿಸಿಕೊಂಡಿರುವ ಮುಸ್ಲಿಂ ಮುಖಂಡರೊಬ್ಬರು ಬಹಿರಂಗವಾಗಿಯೇ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿ ಗಮನ ಸೆಳೆದಿದ್ದಾರೆ.
ಯುಟಿ ಖಾದರ್ ಕಳೆದ ಮೂರು ಅವಧಿಯಲ್ಲಿ ಪ್ರತಿನಿಧಿಸುತ್ತಿರುವ ಮುಸ್ಲಿಂ ಬಾಹುಳ್ಯದ ಮಂಗಳೂರು ವಿಧಾನಸಭಾ ಕ್ಷೇತ್ರದ ಎರಡು ಕಡೆ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಲಾಗಿದೆ. ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ಬೃಹತ್ ಪೋಸ್ಟರ್ ಹಾಕಿದ್ದು, ಸಾವರ್ಕರ್ ಅವರಿಗೆ ನಮನಗಳು ಎಂದು ಬರೆದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎ.ಆರ್. ಫಝಲ್ ಫ್ಲೆಕ್ಸ್ ಹಾಕಿದ್ದಾರೆ. ದೇರಳಕಟ್ಟೆ ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿದ್ದರೆ, ಅಸೈಗೋಳಿಯಲ್ಲಿ ಎರಡೂ ಸಮುದಾಯದ ಜನರು ಇದ್ದಾರೆ. ಗುರುವಾರ ಸಂಜೆ ಹೊತ್ತಿಗೆ ಎರಡೂ ಕಡೆ ಫ್ಲೆಕ್ಸ್ ಕಂಡುಬಂದಿದ್ದು ಕೆಲವರಿಂದ ವಿರೋಧವೂ ವ್ಯಕ್ತವಾಗಿತ್ತು.



ಆದರೆ ಈ ರೀತಿ ಫ್ಲೆಕ್ಸ್ ಹಾಕಿದ ಬೆನ್ನಲ್ಲೇ ಕೋಣಾಜೆ ಪೊಲೀಸರು ದೇರಳಕಟ್ಟೆಯಲ್ಲಿ ಹಾಕಿದ್ದ ಫ್ಲೆಕ್ಸನ್ನು ತೆರವು ಮಾಡಿದ್ದಾರೆ. ದೇರಳಕಟ್ಟೆ ಮುಸ್ಲಿಂ ಬಾಹುಳ್ಯದ ಪ್ರದೇಶ ಆಗಿರುವುದರಿಂದ ಘರ್ಷಣೆಗೆ ಅವಕಾಶ ಮಾಡಿಕೊಡುವುದು ಬೇಡವೆಂದು ಪೊಲೀಸರೇ ತೆರವು ಕಾರ್ಯ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಪೊಲೀಸರೇ ಫ್ಲೆಕ್ಸ್ ತೆರವು ಮಾಡಿರುವುದು ಬಿಜೆಪಿ ಮುಖಂಡರನ್ನು ಕೆರಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಜಲ್, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸಾವರ್ಕರ್ ಅವರಿಗೆ ನಮನ ಸಲ್ಲಿಸುವುದರಲ್ಲಿ ತಪ್ಪೇನಿದೆ. ನಾನು ಭಯೋತ್ಪಾದಕರ ಪರವಾಗಿ ಫ್ಲೆಕ್ಸ್ ಹಾಕಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಒಂದು ದಿವಸ ಆಗಿರಲಿ, 50 ವರ್ಷ ಆಗಿರಲಿ, ಹೋರಾಟ ಮಾಡಿದವರೆಲ್ಲ ಪ್ರಾತಃ ಸ್ಮರಣೀಯರು. ಅಂತಹ ವ್ಯಕ್ತಿಗಳಿಗೆ ಅವಮಾನ ಮಾಡುವುದು ಸರಿಯಲ್ಲ. ಕೊಣಾಜೆ ಪೊಲೀಸರು ಎಸ್ಡಿಪಿಐ ಕಾರ್ಯಕರ್ತರ ರೀತಿ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Mangalore Muslim Bjp Minority morcha member installs Veer Savarkar flex in Ullal, police remove after knowing it can create spark as it was installed in Muslim based area.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm