ಬ್ರೇಕಿಂಗ್ ನ್ಯೂಸ್
18-08-22 10:18 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಬೆಂಗಳೂರು, ಶಿವಮೊಗ್ಗ, ಮಂಗಳೂರು ಸೇರಿ ರಾಜ್ಯದ ಹಲವೆಡೆ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಫ್ಲೆಕ್ಸ್ ಹಾಕಿದರೆ, ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಅದನ್ನು ತೆರವು ಮಾಡಿ ಕಿಚ್ಚು ಹೊತ್ತಿಕೊಳ್ಳುವಂತೆ ಮಾಡಿದ್ದಾರೆ. ಆದರೆ ಕೋಮು ಸೂಕ್ಷ್ಮ ಪ್ರದೇಶ ಉಳ್ಳಾಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಗುರುತಿಸಿಕೊಂಡಿರುವ ಮುಸ್ಲಿಂ ಮುಖಂಡರೊಬ್ಬರು ಬಹಿರಂಗವಾಗಿಯೇ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿ ಗಮನ ಸೆಳೆದಿದ್ದಾರೆ.
ಯುಟಿ ಖಾದರ್ ಕಳೆದ ಮೂರು ಅವಧಿಯಲ್ಲಿ ಪ್ರತಿನಿಧಿಸುತ್ತಿರುವ ಮುಸ್ಲಿಂ ಬಾಹುಳ್ಯದ ಮಂಗಳೂರು ವಿಧಾನಸಭಾ ಕ್ಷೇತ್ರದ ಎರಡು ಕಡೆ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಲಾಗಿದೆ. ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ಬೃಹತ್ ಪೋಸ್ಟರ್ ಹಾಕಿದ್ದು, ಸಾವರ್ಕರ್ ಅವರಿಗೆ ನಮನಗಳು ಎಂದು ಬರೆದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎ.ಆರ್. ಫಝಲ್ ಫ್ಲೆಕ್ಸ್ ಹಾಕಿದ್ದಾರೆ. ದೇರಳಕಟ್ಟೆ ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿದ್ದರೆ, ಅಸೈಗೋಳಿಯಲ್ಲಿ ಎರಡೂ ಸಮುದಾಯದ ಜನರು ಇದ್ದಾರೆ. ಗುರುವಾರ ಸಂಜೆ ಹೊತ್ತಿಗೆ ಎರಡೂ ಕಡೆ ಫ್ಲೆಕ್ಸ್ ಕಂಡುಬಂದಿದ್ದು ಕೆಲವರಿಂದ ವಿರೋಧವೂ ವ್ಯಕ್ತವಾಗಿತ್ತು.



ಆದರೆ ಈ ರೀತಿ ಫ್ಲೆಕ್ಸ್ ಹಾಕಿದ ಬೆನ್ನಲ್ಲೇ ಕೋಣಾಜೆ ಪೊಲೀಸರು ದೇರಳಕಟ್ಟೆಯಲ್ಲಿ ಹಾಕಿದ್ದ ಫ್ಲೆಕ್ಸನ್ನು ತೆರವು ಮಾಡಿದ್ದಾರೆ. ದೇರಳಕಟ್ಟೆ ಮುಸ್ಲಿಂ ಬಾಹುಳ್ಯದ ಪ್ರದೇಶ ಆಗಿರುವುದರಿಂದ ಘರ್ಷಣೆಗೆ ಅವಕಾಶ ಮಾಡಿಕೊಡುವುದು ಬೇಡವೆಂದು ಪೊಲೀಸರೇ ತೆರವು ಕಾರ್ಯ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಪೊಲೀಸರೇ ಫ್ಲೆಕ್ಸ್ ತೆರವು ಮಾಡಿರುವುದು ಬಿಜೆಪಿ ಮುಖಂಡರನ್ನು ಕೆರಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಜಲ್, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸಾವರ್ಕರ್ ಅವರಿಗೆ ನಮನ ಸಲ್ಲಿಸುವುದರಲ್ಲಿ ತಪ್ಪೇನಿದೆ. ನಾನು ಭಯೋತ್ಪಾದಕರ ಪರವಾಗಿ ಫ್ಲೆಕ್ಸ್ ಹಾಕಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಒಂದು ದಿವಸ ಆಗಿರಲಿ, 50 ವರ್ಷ ಆಗಿರಲಿ, ಹೋರಾಟ ಮಾಡಿದವರೆಲ್ಲ ಪ್ರಾತಃ ಸ್ಮರಣೀಯರು. ಅಂತಹ ವ್ಯಕ್ತಿಗಳಿಗೆ ಅವಮಾನ ಮಾಡುವುದು ಸರಿಯಲ್ಲ. ಕೊಣಾಜೆ ಪೊಲೀಸರು ಎಸ್ಡಿಪಿಐ ಕಾರ್ಯಕರ್ತರ ರೀತಿ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Mangalore Muslim Bjp Minority morcha member installs Veer Savarkar flex in Ullal, police remove after knowing it can create spark as it was installed in Muslim based area.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm