ಬ್ರೇಕಿಂಗ್ ನ್ಯೂಸ್
18-08-22 10:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಶ್ರೀಕೃಷ್ಣ ಜನ್ಮಾಷ್ಟಮಿಗೆ ತುಳು ಚಿತ್ರತಂಡವೊಂದು ವಿಶಿಷ್ಟ ರೀತಿಯಲ್ಲಿ ಶುಭ ಹಾರೈಸಲು ಹೋಗಿ ಹಿಂದುಗಳ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತೀಚೆಗಷ್ಟೇ ಭಾರೀ ಸದ್ದು ಮಾಡಿದ ರಾಜ್ ಸೌಂಡ್ಸ್ ಅಂಡ್ ಲೈಟ್ಸ್ ಚಿತ್ರದ ಯಶಸ್ಸಿನಿಂದ ಬೀಗುತ್ತಿರುವ ಆರ್ ಜೆ ವಿನೀತ್ ಮುಖ್ಯ ಭೂಮಿಕೆಯಲ್ಲಿ ಮತ್ತೊಂದು ಚಿತ್ರ ತಯಾರಾಗುತ್ತಿದ್ದು, ಅದರ ಟೈಟಲ್ ಲಾಂಚ್ ವೇಳೆಯಲ್ಲೇ ಎಡವಟ್ಟು ಮಾಡಿಕೊಂಡಿದೆ.
ಪುಳಿಮುಂಚಿ ಎನ್ನುವ ಹೆಸರಿನ ಹೊಸ ಚಿತ್ರದ ಟೈಟಲ್ ಲಾಂಚ್ ಇಂದು ಆಗಿದೆ ಎನ್ನಲಾಗುತ್ತಿದ್ದು, ಅದರ ನಂತರ ಕೃಷ್ಣಾಷ್ಟಮಿಯ ಪ್ರಯುಕ್ತ ವಿಶಿಷ್ಟವಾಗಿ ಶುಭ ಹಾರೈಸಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿತ್ತು. ಆರ್ ಜೆ ವಿನೀತ್ ಅವರನ್ನು ಕೃಷ್ಣನ ರೀತಿ ತೋರಿಸಿ, ಶ್ರೀಕೃಷ್ಣನ ಸಂದೇಶವನ್ನೇ ತಿರುಚಿ ಅದರಲ್ಲಿ ಕೊಟ್ಟಿರುವುದು ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ. ಪೋಸ್ಟರ್ ಮೇಲ್ಭಾಗದಲ್ಲಿ ಶ್ರೀಕೃಷ್ಣನ ಸಂದೇಶವನ್ನು ತಿರುಚಿ, ಹಾಸ್ಯ ಸಂಸ್ಥಾಪನಾರ್ಥಾಯ ಸಂಭವಾಮಿ ಪದೇ ಪದೇ ಎಂದು ಬರೆಯುವ ಮೂಲಕ ಕೃಷ್ಣನ ಭಗವದ್ಗೀತೆಯ ಶ್ಲೋಕವನ್ನೇ ಅಣಕಿಸಿದೆ.
ಇದರ ಬಗ್ಗೆ ಖಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದ್ದು, ಹಲವು ಪೋಸ್ಟ್ ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಚಿತ್ರತಂಡ ಕ್ಷಮೆ ಯಾಚಿಸದೇ ಇದ್ದಲ್ಲಿ ಚಿತ್ರವನ್ನು ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಬಾಲಿವುಡ್ಡಿನಲ್ಲೇ ಹಿಂದುಗಳನ್ನು, ಹಿಂದು ದೇವರನ್ನು ಅಣಕಿಸಿದ ಚಿತ್ರಕ್ಕೆ ಬಹಿಷ್ಕಾರ ಹಾಕಲಾಗಿದೆ. ತುಳು ಚಿತ್ರತಂಡಕ್ಕೂ ಅದೇ ರೀತಿಯ ಬಹಿಷ್ಕಾರ ಹಾಕಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿದೆ. ರಾಜ್ ಸೌಂಡ್ಸ್ ಅಂಡ್ ಲೈಟ್ಸ್ ಯಶಸ್ಸಿನಿಂದಾಗಿ ಮತ್ತೊಂದು ಹಾಸ್ಯ ಪ್ರಧಾನ ಚಿತ್ರವನ್ನು ವಿನೀತನ್ನೇ ಪ್ರಮುಖವಾಗಿಟ್ಟುಕೊಂಡು ತೆರೆಗೆ ತರಲು ಚಿತ್ರತಂಡ ರೆಡಿಯಾಗಿದ್ದರೆ, ಆರಂಭದಲ್ಲೇ ಎಡವಟ್ಟು ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.
Mangalore Pulimunchi tulu movie poster creates controversy and spark on social media with the changes made in krishna sloka.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm