ಬ್ರೇಕಿಂಗ್ ನ್ಯೂಸ್
05-10-20 02:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 05: ಪ್ರಸಿದ್ಧ ಮಂಗಳೂರು ದಸರಾ ಉತ್ಸವವನ್ನು ಗರಿಷ್ಠ ಸುರಕ್ಷಾ ಕ್ರಮಗಳೊಂದಿಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ನಡೆಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ನಿರ್ಧರಿಸಿದೆ.
ದಸರಾ ಉತ್ಸವ ಆಚರಣೆ ಕುರಿತು ಕುದ್ರೋಳಿ ಕ್ಷೇತ್ರದ ಸಭಾಭವನದಲ್ಲಿ ಭಾನುವಾರ ಆಹ್ವಾನಿತರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಮಂಗಳೂರು ದಸರಾವನ್ನು ಕೊರೊನಾದಿಂದಾಗಿ ಹಿಂದಿನಂತೆ ವೈಭವದಿಂದ ನಡೆಸಲು ಸಾಧ್ಯವಿಲ್ಲ. ‘ನಮ್ಮ ದಸರಾ - ನಮ್ಮ ಸುರಕ್ಷೆ’ ಎಂಬ ಘೋಷವಾಕ್ಯ ಮುಂದಿಟ್ಟು ಉತ್ಸವ ಆಚರಿಸಲಾಗುವುದು ಎಂದು ಹೇಳಿದರು.
ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಎಲ್ಲ ಭಕ್ತರಿಗೆ ಮಾಸ್ಕ್ ಕಡ್ಡಾಯಗೊಳಿಸಿ, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ಗೆ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಪ್ರತಿನಿತ್ಯ 150ರಿಂದ 200 ಜನರ ಸ್ವಯಂಸೇವಕರ ತಂಡ ರಚಿಸಲಾಗುವುದು ಎಂದರು.
ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಮಾತನಾಡಿ, ಪೂಜೆ, ಪ್ರಸಾದ ವಿತರಣೆ, ಮಕ್ಕಳು, ಹಿರಿಯರ ಸುರಕ್ಷತೆ ಸೇರಿ ಪ್ರತಿ ವಿಚಾರ ಗಮನದಲ್ಲಿಟ್ಟು ಕ್ಷೇತ್ರದ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಳ್ಳಲಿದೆ. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಂತೆ ದಸರಾ ಮಹೋತ್ಸವ ನಡೆಯಲಿದೆ. ಸರ್ಕಾರದ ಮಾರ್ಗಸೂಚಿ ಅನುಸರಿಸಿ ಜೊತೆಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ಉತ್ಸವ ನಡೆಸಲಾಗುವುದು. ಆದರೆ ಈ ಬಾರಿ ದಸರಾ ಮೆರವಣಿಗೆ ಇರುವುದಿಲ್ಲ ಎಂದರು.

ಕ್ಷೇತ್ರದ ಆಡಳಿತ ಮಂಡಳಿ ಸದಸ್ಯ ರವಿಶಂಕರ್ ಮಿಜಾರ್ ಮಾತನಾಡಿ, ಕರೊನಾ ಸಂಕಷ್ಟ ಮಧ್ಯೆಯೂ ಸಂಪ್ರದಾಯ ಪ್ರಕಾರ ದೇವರ ಸೇವೆ ನಡೆಸುವುದು ಅನಿವಾರ್ಯ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.
ಉದ್ಯಮಿ ಶೈಲೇಂದ್ರ ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ರಮಾನಾಥ್ ಕಾರಂದೂರು, ರಾಧಾಕೃಷ್ಣ ಅಶೋಕನಗರ, ದೇವೇಂದ್ರ ಪೂಜಾರಿ, ಶೇಖರ್ ಪೂಜಾರಿ, ಲೀಲಾಕ್ಷ ಕರ್ಕೇರ ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am