ಬ್ರೇಕಿಂಗ್ ನ್ಯೂಸ್
05-10-20 02:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 05: ಪ್ರಸಿದ್ಧ ಮಂಗಳೂರು ದಸರಾ ಉತ್ಸವವನ್ನು ಗರಿಷ್ಠ ಸುರಕ್ಷಾ ಕ್ರಮಗಳೊಂದಿಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ನಡೆಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ನಿರ್ಧರಿಸಿದೆ.
ದಸರಾ ಉತ್ಸವ ಆಚರಣೆ ಕುರಿತು ಕುದ್ರೋಳಿ ಕ್ಷೇತ್ರದ ಸಭಾಭವನದಲ್ಲಿ ಭಾನುವಾರ ಆಹ್ವಾನಿತರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಮಂಗಳೂರು ದಸರಾವನ್ನು ಕೊರೊನಾದಿಂದಾಗಿ ಹಿಂದಿನಂತೆ ವೈಭವದಿಂದ ನಡೆಸಲು ಸಾಧ್ಯವಿಲ್ಲ. ‘ನಮ್ಮ ದಸರಾ - ನಮ್ಮ ಸುರಕ್ಷೆ’ ಎಂಬ ಘೋಷವಾಕ್ಯ ಮುಂದಿಟ್ಟು ಉತ್ಸವ ಆಚರಿಸಲಾಗುವುದು ಎಂದು ಹೇಳಿದರು.
ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಎಲ್ಲ ಭಕ್ತರಿಗೆ ಮಾಸ್ಕ್ ಕಡ್ಡಾಯಗೊಳಿಸಿ, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ಗೆ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಪ್ರತಿನಿತ್ಯ 150ರಿಂದ 200 ಜನರ ಸ್ವಯಂಸೇವಕರ ತಂಡ ರಚಿಸಲಾಗುವುದು ಎಂದರು.
ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಮಾತನಾಡಿ, ಪೂಜೆ, ಪ್ರಸಾದ ವಿತರಣೆ, ಮಕ್ಕಳು, ಹಿರಿಯರ ಸುರಕ್ಷತೆ ಸೇರಿ ಪ್ರತಿ ವಿಚಾರ ಗಮನದಲ್ಲಿಟ್ಟು ಕ್ಷೇತ್ರದ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಳ್ಳಲಿದೆ. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಂತೆ ದಸರಾ ಮಹೋತ್ಸವ ನಡೆಯಲಿದೆ. ಸರ್ಕಾರದ ಮಾರ್ಗಸೂಚಿ ಅನುಸರಿಸಿ ಜೊತೆಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ಉತ್ಸವ ನಡೆಸಲಾಗುವುದು. ಆದರೆ ಈ ಬಾರಿ ದಸರಾ ಮೆರವಣಿಗೆ ಇರುವುದಿಲ್ಲ ಎಂದರು.

ಕ್ಷೇತ್ರದ ಆಡಳಿತ ಮಂಡಳಿ ಸದಸ್ಯ ರವಿಶಂಕರ್ ಮಿಜಾರ್ ಮಾತನಾಡಿ, ಕರೊನಾ ಸಂಕಷ್ಟ ಮಧ್ಯೆಯೂ ಸಂಪ್ರದಾಯ ಪ್ರಕಾರ ದೇವರ ಸೇವೆ ನಡೆಸುವುದು ಅನಿವಾರ್ಯ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.
ಉದ್ಯಮಿ ಶೈಲೇಂದ್ರ ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ರಮಾನಾಥ್ ಕಾರಂದೂರು, ರಾಧಾಕೃಷ್ಣ ಅಶೋಕನಗರ, ದೇವೇಂದ್ರ ಪೂಜಾರಿ, ಶೇಖರ್ ಪೂಜಾರಿ, ಲೀಲಾಕ್ಷ ಕರ್ಕೇರ ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm