ಬ್ರೇಕಿಂಗ್ ನ್ಯೂಸ್
19-08-22 07:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19 : ಸಾವರ್ಕರ್ ಬಗ್ಗೆ ಕಾಂಗ್ರೆಸ್ ಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಮಾತ್ರ ಇರೋದು. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ನಾವೆಲ್ಲೂ ಹೇಳಿಲ್ಲ. ಸ್ವಾತಂತ್ರ್ಯ ಹೋರಾಟ ಮಾಡಿದ್ದಕ್ಕೆ ಬ್ರಿಟಿಷರು ಅವರನ್ನು ಅಂಡಮಾನ್ ಜೈಲಿಗೆ ಹಾಕಿದ್ದರು ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಕೋರಿ ಪತ್ರ ಬರೆದಿದ್ದಕ್ಕೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಹಾಗೆ ಜೈಲಿನಿಂದ ಹೊರಬಂದಿದ್ದ ಸಾವರ್ಕರ್, ಸ್ವಾತಂತ್ರ್ಯಕ್ಕಾಗಿ ಆನಂತರ ಹೋರಾಡಲಿಲ್ಲ. 1924ರ ನಂತರ ಸಾವರ್ಕರ್ ದೇಶಕ್ಕಾಗಿ ಹೋರಾಟ ಮಾಡಿದ ಉದಾಹರಣೆ ಇದೆಯಾ ? ಆಬಳಿಕ ಸಾವರ್ಕರ್ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ. ಈ ಬಗ್ಗೆ ಮಾತ್ರ ಕಾಂಗ್ರೆಸ್ ಪ್ರಶ್ನೆ ಇರುವುದು. ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದೂ ಇದನ್ನು ಮಾತ್ರ ಎಂದು ಹೇಳಿದರು.

ಹಾಗೆಂದು, ಸಿದ್ದರಾಮಯ್ಯ ಯಾರಿಗೂ ಆಕ್ರೋಶ ಬರುವಂತೆ ಹೇಳಿಕೆಯನ್ನು ಕೊಟ್ಟಿಲ್ಲ. ಬ್ಯಾನರ್ ಹಾಕಿದ್ದಕ್ಕೆ ಆಕ್ಷೇಪ ಮಾಡಿಲ್ಲ. ಆದರೆ ಬ್ಯಾನರ್ ಹಾಕಿದ್ದವರ ಉದ್ದೇಶದ ಬಗ್ಗೆ ಮಾತಾಡಿದ್ದರು. ಯಾರು ಯಾರ ಬ್ಯಾನರ್ ಹಾಕಿದ್ರೂ ಮೂರನೇ ವ್ಯಕ್ತಿ ತೆಗೆಯುವಂತಿಲ್ಲ. ಯಾರು ಕೂಡ ಆಯಾ ಆಡಳಿತದಿಂದ ಅನುಮತಿ ಪಡೆದು ಬ್ಯಾನರ್ ಹಾಕಬಹುದು. ಬ್ಯಾನರ್ ಹಾಕುವವರು ಉತ್ತಮ ಉದ್ದೇಶದಿಂದ ಹೊಂದಿರಬೇಕು ಅಷ್ಟೇ. ಉದ್ದೇಶ, ದುರುದ್ದೇಶ ಎರಡನ್ನೂ ಇಲ್ಲಿ ಗಮನಿಸಬೇಕು ಎಂದು ಯು.ಟಿ ಖಾದರ್ ಹೇಳಿದರು.
ಆದರೆ ಮಡಿಕೇರಿಯಲ್ಲಿ ಆಗಿರುವ ಘಟನೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ. ವಿಪಕ್ಷ ನಾಯಕರ ಕಾರಿಗೆ ಮೊಟ್ಟೆ ಎಸೆದಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಜವಾಬ್ದಾರಿ. ಬಿಜೆಪಿ ಆಡಳಿತದಲ್ಲಿ ಪೊಲೀಸ್ ಇಲಾಖೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ರಾಜಕೀಯ ಪಕ್ಷದ ಕೈಗೊಂಬೆಯಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. ಕರ್ನಾಟಕ ರಾಜ್ಯವನ್ನು ಕೋಮುವಾದಿಗಳ ಮತ್ತು ಗೂಂಡಾಗಳ ಕೈಯಲ್ಲಿ ಕೊಟ್ಟು ಸರ್ಕಾರ ಮೌನವಾಗಿ ಕುಳಿತಿದೆ. ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವವರ ಮೇಲೆ ಕ್ರಮ ತೆಗೆದುಕೊಳ್ಳುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
Mangalore Congress party has never said Savarkar is not a freedom fighter says MLA UT Khader
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm