ಬ್ರೇಕಿಂಗ್ ನ್ಯೂಸ್
05-10-20 08:13 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಜಿಲ್ಲೆಯಲ್ಲಿ ಅಕ್ರಮ ಗೋ ಕಳ್ಳತನ, ಗೋಹತ್ಯೆ ಹೆಚ್ಚುತ್ತಿದ್ದು ಜಿಲ್ಲಾಡಳಿತ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲಾಡಳಿತ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ವಿಫಲವಾದರೆ ಬಜರಂಗದಳ ಕಾರ್ಯಕರ್ತರು ರಸ್ತೆಗಿಳಿಯಬೇಕಾಗುತ್ತದೆ. ಕಾರ್ಯಕರ್ತರೇ ಗೋಹತ್ಯೆಗೆ ನಿಯಂತ್ರಣ ಹೇರಲಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಶರಣ್ ಪಂಪ್ವೆಲ್ ಎಚ್ಚರಿಸಿದ್ದಾರೆ.
ಮಂಗಳೂರಿನ ಕದ್ರಿಯಲ್ಲಿರುವ ವಿಹಿಂಪ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಶರಣ್ ಪಂಪ್ವೆಲ್, ಜಿಲ್ಲೆಯಲ್ಲಿ ಇನ್ನೂ ಗೋ ಕಳ್ಳತನ, ಅಕ್ರಮ ಗೋ ಹತ್ಯೆ ಮುಂದುವರಿದ್ರೆ ಬಜರಂಗದಳ ಸಹಿಸಲ್ಲ. ಜಿಲ್ಲಾಧಿಕಾರಿ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಳೆದ ಒಂದು ತಿಂಗಳಲ್ಲಿ ಮಂಗಳೂರಿನ ವಿವಿಧ ಠಾಣೆಗಳಲ್ಲಿ ಅಕ್ರಮ ಗೋಸಾಗಾಟ ವಿಚಾರದಲ್ಲಿ ಹಲವಾರು ಪ್ರಕರಣ ದಾಖಲಾಗಿದೆ. ಹಿಂದೆಲ್ಲಾ ಟೆಂಪೋದಲ್ಲಿ ಗೋಸಾಗಾಟ ನಡೆಯುತ್ತಿತ್ತು. ಈಗ, ಸ್ವಿಫ್ಟ್ ಕಾರು, ಇನ್ನೋವಾಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ. ಗೋಸಾಗಣೆ ಮಾಫಿಯಾ ಹಿಂದೆ ದೊಡ್ಡ ಜಾಲವೇ ಇದೆ. ಇದನ್ನು ಹತ್ತಿಕ್ಕಲು ಪೊಲೀಸ್ ಇಲಾಖೆ ವಿಶೇಷ ರೀತಿಯ ತಂಡ ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಅಕ್ರಮ ಗೋಸಾಗಾಟ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಎರಡು ದಿನಗಳ ಹಿಂದೆ ಟೆಂಪೋದಲ್ಲಿ ದನ ಸಾಗಾಟ ಮಾಡುತ್ತಿದ್ದಾಗ ಐದಾರು ಕರುಗಳು ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟಿದ್ದವು. ಕುದ್ರೋಳಿ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದಾಗ ಕರುಗಳು ರಸ್ತೆಗೆ ಬಿದ್ದು ನರಳಾಡಿದ್ದವು. ಇದನ್ನು ಖಂಡಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರೂ, ಪೊಲೀಸರು ಅವರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಇಂತಹ ಕೃತ್ಯಗಳು ಮುಂದುವರಿದರೆ ಬಜರಂಗದಳ ಸುಮ್ಮನಿರಲ್ಲ. ಇದರಿಂದ ಜಿಲ್ಲೆಯ ಶಾಂತಿ ಕದಡಿದರೆ ಅದಕ್ಕೆ ಜಿಲ್ಲಾಡಳಿತವೇ ಹೊಣೆಯಾಗಬೇಕು ಎಂದು ಎಚ್ಚರಿಸಿದರು.
ಸುದ್ದಿಗೋಷ್ಟಿಯಲ್ಲಿ ಬಜರಂಗದಳ ಸಂಚಾಲಕ ಭುಜಂಗ ಕುಲಾಲ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಉಪಾಧ್ಯಕ್ಷ ಮನೋಹರ ಸುವರ್ಣ, ಪ್ರದೀಪ್ ಪಂಪ್ವೆಲ್, ಗುರುಪ್ರಸಾದ್ ಉಳ್ಳಾಲ್ ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm